ಜನೌಷಧಿ ಬಂದ್ ಕ್ರಮ ಸರಿಯಲ್ಲ: ಎಚ್ ಪೂಜಪ್ಪ
Janaushadhi bandh move is wrong: H Poojappa
ಹೂವಿನ ಹಡಗಲಿ 01: ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡುವ ಕ್ರಮ ಸರಿಯಲ್ಲ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಎಚ್ ಪೂಜಪ್ಪ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಹೂವಿನ ಹಡಗಲಿ ಮಂಡಲದ ವತಿಯಿಂದ ಜನ ಓಷಧಿ ಕೇಂದ್ರಗಳನ್ನು ಬಂದ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ಆಸ್ಪತ್ರೆಯ ಹೊರಗಡೆ ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟಿಸಲಾಯಿತು.ಬಡವರಿಗೆ ವರದಾನ ಆಗಿರುವ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ಇದ್ದಲ್ಲಿ ಈ ಕೂಡಲೇ ರಾಜ್ಯ ಸರ್ಕಾರ ಪುನಃ -ಆರಂಭಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಪೂಜಾರ್ ಮಲ್ಲಿಕಾರ್ಜುನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮೊದಲಿನಂತೆ ಈ ಸೌಲಭ್ಯ ಮುಂದುವರೆಸಬೇಕು ಎಂದು ತಿಳಿಸಿದರು. ಮುಖಂಡರಾದ ಬೀರಬ್ಬಿ ಬಸಣ್ಣ,ಸಿರಾಜ ಬಾವಿಹಳ್ಳಿ, ಐನಳ್ಳಿ ಭಾಗ್ಯಮ್ಮ ಮೀರಾಬಾಯಿ, ಪುಟಾಣಿ ಬಸವರಾಜ್ ಪುನೀತ್ ದೊಡ್ಡನಿ ಲಂಕೇಶ್ ನಾಯಕ್ ಆರಿ್ಟ.ನಾಗರಾಜ್, ಆಂಜನೇಯ ಧಾರವಾಡ, ಬಸವರಾಜ್ ವಕೀಲರು ವಕೀಲರಾದ ಮಂಜುನಾಥ ಶಿವಕುಮಾರ್ ಹಾಗೂ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 