ವಿಶ್ವ ಮಾನಸಿಕ ಆರೊಗ್ಯ ದಿನಾಚರಣೆ 2025 ರ ಅಂಗವಾಗಿ ಜಾಥಾ ಕಾರ್ಯಕ್ರಮ ಯಶಸ್ವಿ
Jatha program as part of World Mental Health Day 2025 a success
ವಿಶ್ವ ಮಾನಸಿಕ ಆರೊಗ್ಯ ದಿನಾಚರಣೆ 2025 ರ ಅಂಗವಾಗಿ ಜಾಥಾ ಕಾರ್ಯಕ್ರಮ ಯಶಸ್ವಿ
ಧಾರವಾಡ ಅ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೊಗ್ಯ ದಿನಾಚರಣೆ 2025 ರ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಇಂದು (ಅ.14) ಬೆಳಿಗ್ಗೆ 9 ಧಾರವಾಡ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣದಿಂದ ಹಮ್ಮಿಕೊಳ್ಳಲಾಯಿತು.
ತುರ್ತು ಪರಿಸ್ಥಿತಿ ಮತ್ತು ವಿಪತ್ತುಗಳಲ್ಲಿ ಮಾನಸಿಕ ಆರೋಗ್ಯ ಸೇವೆಗಳ ಲಭ್ಯತೆ ಈ ವರ್ಷದ ಘೋಷವಾಕ್ಯದೊಂದಿಗೆ ಜಾಥಾ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಫರಶುರಾಮ ಎಫ್. ದೊಡ್ಡಮನಿ ಅವರು ಉದ್ಘಾಟಸಿ ಮಾತನಾಡಿ, ಶಾಲಾ- ಕಾಲೇಜುಗಳಲ್ಲಿ ಮತ್ತು ಸಮುದಾಯಗಳಲ್ಲಿ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಮ್ ಹೊನಕೇರಿ ಅವರು ಮಾತನಾಡಿ, ಮಾನಸಿಕ ಆರೋಗ್ಯದ ಕುರಿತು ಸಮುದಾಯದಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಿದೆ ಎಂದು ತಿಳಿಸಿದರು.
ಜಾಥಾ ಕಾರ್ಯಕ್ರಮದಲ್ಲಿ ಡಾ. ಎಸ್. ಬಿ. ಕಳಸೂರಮಠ, ಡಾ. ಸುಜಾತಾ ಹಸವಿಮಠ, ಡಾ. ಮಂಜುನಾಥ ಎಸ್., ಡಾ. ಮಹೇಶ ಚಿತ್ತರಗಿ, ಡಾ. ರವೀಂದ್ರ ಬೋವೇರ, ಡಾ. ಫರಶರಾಮ ಎಫ್. ಕೆ., ಡಾ. ತನುಜಾ ಕೆ. ಎನ್., ಬಿ. ಆರ್ ಪಾತ್ರೋಟ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸಿಬ್ಬಂದಿಯವರು ಹಾಗೂ ಶ್ರೇಯಾ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 