ದೂರದರ್ಶನಕ್ಕೆ 60ರ ಸಂಭ್ರಮ: ಅಂಚೆ ಚೀಟಿ ಬಿಡುಗಡೆ ಮಾಡಿದ ಜಾವಡೇಕರ್
ನವದೆಹಲಿ, ಸೆ 16 ಸರ್ಕಾರಿ ಸ್ವಾಮ್ಯದ ವಾಹಿನಿ ದೂರದರ್ಶನಕ್ಕೆ 60 ವರ್ಷ ಪೂರ್ಣಗೊಂಡ ನೆನಪಿಗಾಗಿ ಸೋಮವಾರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದರು.
ದೂರದರ್ಶನದ 60ನೇ ವರ್ಷದ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೂರದರ್ಶನದ ಸುದ್ದಿ ನಿಖರವಾಗಿದ್ದು, ಯಾವುದೇ ಭಾವನೆಗಳನ್ನು ಕೆದಕುವ ವಿಷಯಗಳಿರುವುದಿಲ್ಲ ಎಂದು ಹೇಳಿದರು.
ಯಾವುದೇ ಭಾವನೆಗಳನ್ನು ಉದ್ರಿಕ್ತಗೊಳಿಸದೆ ನಿಖರವಾದ ಮತ್ತು ಅತಿ ವೇಗವಾಗಿ ಸುದ್ದಿ ಕೊಡುತ್ತಿರುವುದು ಸಾರ್ವಜನಿಕ ಪ್ರಸಾರ ಸಂಸ್ಥೆಯ ಮುಖ್ಯ ಸಾಧನೆಯಾಗಿದೆ ಎಂದು ಜಾವಡೇಕರ್ ಹೇಳಿದರು.
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ದೂರದರ್ಶನ ಮಹಾನಿರ್ದೇಶಕರಾದ ಸುಪ್ರಿಯಾ ಸಾಹು ಕಳೆದ ಕೆಲವು ವರ್ಷಗಳಲ್ಲಿ ದೂರದರ್ಶನ ಮಾಡಿದ ಸಾಧನೆಗಳನ್ನು ವಿವರಿಸಿದರು.
1959 ಸೆಪ್ಟೆಂಬರ್ 15ರಂದು ಸ್ಥಾಪನೆಯಾದ ಸ್ಟುಡಿಯೋ ಮತ್ತು ಟ್ರಾನ್ಸ್ ಮಿಟರ್ ಮೂಲಸೌಕರ್ಯದ ದೃಷ್ಟಿಯಿಂದ ದೂರದರ್ಶನವು ಭಾರತದ ಅತಿದೊಡ್ಡ ಪ್ರಸಾರ ಸಂಸ್ಥೆಗಳಲ್ಲಿ ಒಂದಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 