ದಿ. 14ರಂದು ಜಯಸಿಂಹ ವಿಜಯಪುರಕ್ಕೆ ಆಗಮನ
Jayasimha arrives in Vijayapura on the 14th
ವಿಜಯಪುರ 13: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಅಸಗೋಡು ಜಯಸಿಂಹ ಅವರು ದಿ. 14. ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ಸಾಯಂಕಾಲ 4 ಗಂಟೆಗೆ ಸಮಾಜದ ಬಾಂಧವರೊಂದಿಗೆ ಸಭೆ ನಡೆಸಲಿದ್ದಾರೆ.
ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ವಾವಲಂಬಿ ಯೋಜನೆ ಅಡಿಯಲ್ಲಿ ಬ್ರಾಹ್ಮಣ ಸಮಾಜಕ್ಕೆ ಸಹಾಯಧನ ಹಾಗೂ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಲಭ್ಯವಾಗಿರುವ ಎಲ್ಲಾ ಯೋಜನೆಗಳ ವಿವರವನ್ನು ಅಧ್ಯಕ್ಷರು ವಿಪ್ರ ಸಮಾಜಕ್ಕೆ ಮನವರಿಕೆ ಮಾಡಿ ಕೊಡುವ ಯೋಜನೆ ಯೊಂದಿಗೆ ನಗರಕ್ಕೆ ಆಗಮಿಸುತ್ತಿದ್ದು ವಿಪ್ರ ಸಮುದಾಯದ ಎಲ್ಲ ಬಾಂಧವರು ಸಭೆಗೆ ಆಗಮಿಸಬೇಕಾಗಿ ವಿನಂತಿ.
ಕಾರ್ಯಕ್ರಮದ ಸಂಘಟಕರಾದ ಸತೀಶ್ಚಂದ್ರ ಕುಲಕರ್ಣಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾಯಿತ ಜಿಲ್ಲಾ ಪ್ರತಿನಿಧಿ , ಹಾಗೂ ಆನಂದ ಜೋಶಿ, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘ, ಹಾಗೂ ಬ್ರಾಹ್ಮಣ ಸಮಾಜದ ಮುಖಂಡರಾದ ಗೋಪಾಲ ನಾಯಕ, ರಾಘವೇಂದ್ರ ಅಲಗೂರ, ಕೃಷ್ಣಾಜಿ ಕುಲಕರ್ಣಿ,ಮಹೇಶ್ ದೇಶಪಾಂಡೆ, ಅರವಿಂದ ಜೋಶಿ ಹಾಗೂ ಪ್ರಕಾಶ ಅಕ್ಕಲಕೋಟ, ವಿಜಯಕುಮಾರ್ ಜೋಶಿ, ವಿಕಾಸ ಪದಕಿ ವಿನಂತಿಸಿಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 