ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಜಿಂದಾಲ್ ಶಾಲೆಯ ವಿದ್ಯಾರ್ಥಿಗಳ ಆಯ್ಕೆ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಜಿಂದಾಲ್ ಶಾಲೆಯ ವಿದ್ಯಾರ್ಥಿಗಳ ಆಯ್ಕೆ Jindal School students selected for national level karate tournament

ಬಳ್ಳಾರಿ 07:  ಟ್ರಡಿಷನಲ್ ಶೊಟೋಕಾನ್ ಕರಾಟೆ ಅಕಾಡೆಮಿ ಕರ್ನಾಟಕದ ಕರಾಟೆ ವಿದ್ಯಾರ್ಥಿಗಳು ಅಸ್ಸಾಂ ರಾಜ್ಯದ ಗುಹಾಟಿಯಲ್ಲಿ ಮೇ 16 ಮತ್ತು 17ರಂದು ನಡೆಯಲಿರುವ 24ನೇ ಅಖಿಲ ಭಾರತ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆಎಂದು ಅಕಾಡೆಮಿಯ ಹಿರಿಯ ಕರಾಟೆ ತರಬೇತುದಾರ ಕಟ್ಟೆ ಸ್ವಾಮಿ ತಿಳಿಸಿದ್ದಾರೆ.ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬಳ್ಳಾರಿಯ ತೋರಣಗಲ್ಲು ಜಿಂದಾಲ್ ಶಾಲೆಯ ಕರಾಟೆ ಪಟುಗಳು ಸೇರಿದಂತೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಕರಾಟೆ ಕ್ರೀಡಾಪಟುಗಳು ಕಟಾ ಮತ್ತು ಕುಮಿತೆ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.

ವಯೋಮಿತಿ ಹಾಗೂ ತೂಕ ವಿಭಾಗಗಳ ಆಧಾರದ ಮೇಲೆ ಒಟ್ಟು 10 ಬಾಲಕರು, 3 ಬಾಲಕಿಯರು ಮತ್ತು 4 ತರಬೇತುದಾರರು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಕಾಡೆಮಿಯ ಹಿರಿಯ ಕರಾಟೆ ತರಬೇತುದಾರರಾದ ಸುಭಾಷ್ ಚಂದ್ರ, ಜಡೇಶ ಹುಲಗಣ್ಣ, ಡಿ. ನಾಗರಾಜ್, ಹನುಮಂತ ಪ್ರಸಾದ್, ನಬೀ ಸಾಹೇಬ, ಆನಂದ್ ಹಾಗೂ ಜಿಂದಾಲ್ ಅಧಿಕಾರಿಗಳು ಮತ್ತು ಕ್ರೀಡಾಭಿಮಾನಿಗಳು ಶುಭ ಹಾರೈಸಿದ್ದಾರೆ ಎಂದು ತಿಳಿಸಿದರು.