ಉದ್ಯೋಗ ಮೇಳಕ್ಕೆ ಗಣ್ಯರಿಂದ ಚಾಲನೆ
Job fair inaugurated by dignitaries
ರಾಯಬಾಗ, 03 : ಗ್ರಾಮೀಣ ಭಾಗದಲ್ಲಿ ನಡೆಯುವ ಉದ್ಯೋಗ ಮೇಳದ ಸದುಪಯೋಗವನ್ನು ಗ್ರಾಮೀಣ ವಿದ್ಯಾರ್ಥಿಗಳು, ಯುವಕರು ಪಡೆದುಕೊಳ್ಳಬೇಕೆಂದು ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ ಸಂಸ್ಥೆಯ ಯಶಿತಾ ಹೇಳಿದರು. ಮಂಗಳವಾರ ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಮಲಗೌಡ ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿ ಹಾಗೂ ಐಕ್ಯೂ ಎಸಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶಪಾಂಡೆ ಸ್ಕಿಲ್ಲಿಂಗ್ ವತಿಯಿಂದ ಯುವಕರಿಗೆ ವಿವಿಧ ಕೌಶಲ್ಯ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಉದ್ಯೋಗ ಮೇಳದಲ್ಲಿ ಭಾರತೀಯ ಬ್ಯಾಂಕೇತರ ಪ್ರತಿಷ್ಠಿತ ಕಂಪನಿಯಾದ ಕ್ರೇಜಿಬಿ ಕಂಪನಿಯು ವಿವಿಧ ಪದವಿ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಟೆಲಿಸೆಲ್ಸ್ ಮತ್ತು ಕಲೆಕ್ಷನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಸಂದರ್ಶನ ನಡೆಸಿತು. ಉದ್ಯೋಗ ಮೇಳದಲ್ಲಿ ಬೆಳಗಾವಿ ಮತ್ತು ಬಾಗಲಕೋಟ ಜಿಲ್ಲೆಯ ವಿವಿಧ ಮಹಾವಿದ್ಯಾಲಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಆರ್.ಕೆ. ಪಾಟೀಲ್ ವಹಿಸಿದ್ದರು. ಅತಿಥಿಗಳಾಗಿ ದೇಶಪಾಂಡೆ ಫೌಂಡೇಶನ್ ಸಂಸ್ಥೆಯ ಆಶಾ ಹನ್ನಾ, ಸುನಿಲ್ ಕಮ್ಮಾರ, ರಾಘವೇಂದ್ರ ಪವಾರ, ಪ್ರೊ. ಆನಂದ ಉಮದಿ, ಪ್ರೊ. ಎಂ.ಎಸ್.ಹಂಜೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿಕಿತಾ ಹಿರೇಮಠ ನಿರೂಪಿಸಿದರು, ಚೈತ್ರಾ ಚೌಗಲೆ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 