ಬಲವಾದ ಸರ್ಕಾರಕ್ಕೆ ಬಿಜೆಪಿ ವಿರುದ್ಧ ಕೈ ಜೋಡಿಸಿ: ಸರ್ವಪಕ್ಷಗಳಿಗೆ ಭೂಪಿಂದರ್ ಸಿಂಗ್ ಹೂಡಾ ಮನವಿ
ರೋಹ್ಟಕ್, ಅ 23: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶ ಬಿಜೆಪಿಗೆ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ, ರಾಜ್ಯದಲ್ಲಿ ಬಲವಾದ ಸರ್ಕಾರ ರಚಿಸಲು ಇತರ ಎಲ್ಲ ಪಕ್ಷಗಳು ಮತ್ತು ಪಕ್ಷೇತರರು ಬಿಜೆಪಿ ವಿರುದ್ಧ ಒಗ್ಗೂಡಬೇಕು ಎಂದು ಹೇಳಿದರು.
ಸುದ್ದಿಗಾರರೊಡನೆ ಈ ಕುರಿತು ಮಾತನಾಡುತ್ತಾ, ಜನಾದೇಶವು ಆಡಳಿತ ಪಕ್ಷದ ವಿರುದ್ಧವಾಗಿದ್ದು, ಮತದಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.
ಕಾಂಗ್ರೆಸ್, ಜೆಜೆಪಿ, ಐಎನ್ಎಲ್ಡಿ, ಮತ್ತು ಸ್ವತಂತ್ರರು ಒಟ್ಟಾಗಿ ಸೇರುವ ಸಮಯ ಬಂದಿದ್ದು, ಬಲವಾದ ಸರ್ಕಾರವನ್ನು ರಚಿಸಬೇಕಿದೆ. ಕೈ ಜೋಡಿಸುವ ಪ್ರತಿಯೊಬ್ಬರಿಗೂ ಗೌರವ ನೀಡಲಾಗುವುದು ಮತ್ತು ಗೌರವಾನ್ವಿತ ಸ್ಥಾನವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಇತ್ತೀಚಿನ ವರದಿಗಳ ಪ್ರಕಾರ, ಆಡಳಿತಾರೂಢ ಬಿಜೆಪಿ 39 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ವಿರೋಧ ಪಕ್ಷದ ಕಾಂಗ್ರೆಸ್ ಅಭ್ಯರ್ಥಿಗಳು 31 ವಿಭಾಗಗಳಲ್ಲಿ ಮುಂದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 