ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಿ - ಮಹೇಶ್ ವಿ ಪೂಜಾರ
Join hands for educational progress - Mahesh V. Pujara
ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಿ - ಮಹೇಶ್ ವಿ ಪೂಜಾರ
ಲೋಕದರ್ಶನ ವರದಿ
ಹೂವಿನ ಹಡಗಲಿ 15 : ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನ ತರುವ ಮೂಲಕ ಶೈಕ್ಷಣಿಕ ಪ್ರಗತಿಗೆ ದಾಪುಗಾಲು ಹಾಕುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಗುಡೇಕೋಟೆ ಕರಿಬಸಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಉತ್ತಂಗಿಯಲ್ಲಿ ಶುಕ್ರವಾರ ಪೋಷಕ- ಶಿಕ್ಷಕರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸರ್ಕಾರ ಉಚಿತ ಪಠ್ಯ ಪುಸ್ತಕ ಸಮವಸ್ತ್ರ ಬಿಸಿಯೂಟ ಮೊಟ್ಟೆ ಬಾಳೇಹಣ್ಣು ಸೇರಿದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಯೋಜನೆ ರೂಪಿಸಿ ಜಾರಿಗೆ ತರಲಾಗುತ್ತಿದೆ ಎಂದರು. ಎಸ್. ಡಿ. ಎಂ ಸಿ ಅಧ್ಯಕ್ಷ ಎಸ್ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.ಶಾಲೆಯ ಮುಖ್ಯ ಗುರುಗಳಾದ ಎಲ್. ಟಿ. ನಾಯಕ್ ಎಸ್ ಡಿ ಎಮ್ ಸಿ ಸದಸ್ಯರಾದ ಎಂ ಮಂಜುನಾಥ್, ಕೆ ಪ್ರಭು, ಬಿ ಚಂದ್ರಶೇಖರ್ ಬಾಚೇನಹಳ್ಳಿ ಕೊಟ್ರೇಶ್ ,ಎನ್ಎಂ ಚೆನ್ನಯ್ಯ ,ಎಸ್ಎಂ ರೂಪ ಪ್ರೇಮ ಲೀಲಾ ಏ. ಕವಿತಾ ಕಾಟ್ರಹಳ್ಳಿ. ಕವಿತಾ ,ಬಸಮ್ಮ ಕಾಳಮ್ಮ ಇದ್ದರು. ಎಸ್. ಷಣ್ಮುಖ , ಪ್ರಭುಗೌಡ ವೀರಭದ್ರಯ್ಯ ಟಿ ಎಂನಿರ್ವಹಿಸಿದರು.ಗ್ರಾಮದ ಪಾಲಕರು ಪೋಷಕರು ಶಾಲಾ ಶಿಕ್ಷಕ ವೃಂದ ಹಾಗೂ ಅತಿಥಿ ಶಿಕ್ಷಕರು ಶಿಕ್ಷಣ ಪ್ರೇಮಿಗಳು ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಸಿಹಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 