ಮಾದಕ ವಸ್ತುಗಳಿಂದ ದೂರ ಇರಲು ನ್ಯಾಯಾಧೀಶೆ ಕರೆ
Judge calls for staying away from drugs
ಮಾದಕ ವಸ್ತುಗಳಿಂದ ದೂರ ಇರಲು ನ್ಯಾಯಾಧೀಶೆ ಕರೆ
ಕಾರವಾರ 25: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರಲು ಕಾರವಾರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಉಂಡೋಡಿ ಕರೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಉ.ಕ. ಕಾರವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಕಾರವಾರದ ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ ಯು ಕಾಲೇಜ್, ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತು ಜಾಗೃತಿ ಮತ್ತು ಮಾದಕವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಥ್ಯ ಸಂಚರಣೆ ಯೋಜನೆ, 2025 ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮವು ಪ್ರೀಮಿಯರ್ ಕಾಲೇಜ ಸಭಾ ಭವನದಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಮಾದಕ ವಸ್ತು ಸೇವನೆ, ಸಾಗಟ ಒಂದು ಪಿಡುಗಾಗಿದೆ. ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿದ್ದಾರೆ. ಕಾರಣ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು. ಇದೊಂದು ಸಮಾಜಿಕ ಪಿಡುಗು . ಇದರ ಬಗ್ಗೆ ಎಲ್ಲಾದರೂ ಮಾಹಿತಿ ಸಿಕ್ಕರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದರು. ವಿದ್ಯಾರ್ಥಿಗಳು ಉತ್ತಮ ಹವ್ಯಾಸ ರೂಢಿಸಿಕೊಳ್ಳಿ. ಮಹನೀಯರ ಜೀವನ ಚರಿತ್ರೆ ಓದಿ. ನೈತಿಕ ಶಕ್ತಿ ಹೆಚ್ಚಿಸಿಕೊಳ್ಳಲು ಕರೆ ನೀಡಿದರು. ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ. ಯು. ಕಾಲೇಜ್ ನ ಪ್ರಾಂಶುಪಾಲ ಆರ್. ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಪೊಲೀಸ್ ಉಪಾಧೀಕ್ಷಕ ಎಸ್.ವಿ.ಗೀರೀಶ್ ಉಪಸ್ಥಿತರಿದ್ದರು. ಶಿರವಾಡದ ಮಾರಿಯಾ ಮಾಗೋ ಫ್ಲೋರಾ ಆಸ್ಪತ್ರೆಯ ವೈದ್ಯೆ ಡಾ. ನಮಿತಾ ವರ್ಗೀಸ್ ಉಪನ್ಯಾಸ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 