ಪಿಬಿ ರಸ್ತೆಯ ಬಿ.ಟಿ.ಪಾಟೀಲ ಮೈದಾನದಲ್ಲಿ ಆರಂಭಗೊಂಡ ಜಂಬೋ ಸರ್ಕಸ್ಗೆ ಚಾಲನೆ
Jumbo Circus inaugurated at B.T. Patil Maidan on PB Road
ರಾಣೇಬೆನ್ನೂರು, ಏ.27: ಸರ್ಕಸ್ ಸಾಹಸ ಪ್ರದರ್ಶನಗಳು ಹಾಗೂ ಸಂಗೀತ, ಕಲಾತ್ಮಕ ಚಟುವಟಿಗಳಿಂದ ಕೂಡಿದ್ದು ಸಾರ್ವಜನಿಕರ ಆಕರ್ಷಣೆಯಾಗಿದ್ದು ಕಲಾವಿದರಿಗೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ನಗರದ ಪಿಬಿ ರಸ್ತೆಯ ಬಿ.ಟಿ.ಪಾಟೀಲ ಮೈದಾನದಲ್ಲಿ ಆರಂಭಗೊಂಡ ಜಂಬೋ ಸರ್ಕಸ್ಗೆ ಚಾಲನೆ ನೀಡಿ ಮಾತನಾಡಿದರು. ನಮ್ಮ ರಾಣೇಬೆನ್ನೂರಿಗೆ 15 ವರ್ಷಗಳ ನಂತರ ಜಂಬೋ ಸರ್ಕಸ್ ಬಂದಿದ್ದು ಸಂತಸದ ಸಂಗತಿಯಾಗಿದ್ದು ಅವರ ಪ್ರದರ್ಶನ ಮನಸ್ಸಿಗೆ ಮುದ ನೀಡುವುದರ ಜೊತೆಗೆ ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ ಆದ್ದರಿಂದ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಭಾರತ ದೇಶದ ಇತಿಹಾಸದ ಪರಂಪರೆಯು ಕಲೆ, ಸಾಹಿತ್ಯ, ಸಂಗೀತಕ್ಕೆ ವಿಶೇಷ ಸ್ಥಾನಮಾನವಿದೆ. ಪಾಶ್ಚಾತ್ಯರೂ ನಾಚುವಂತ ಪ್ರತಿಭೆಗಳಿದ್ದು ಅವುಗಳನ್ನು ಗುರುತಿಸಿ ಬೆಳೆಸುವ ಕಾರ್ಯವಾಗಬೇಕಾಗಿದೆ. ಇತ್ತಿಚಿನ ಯಾಂತ್ರಿಕ ಜೀವನದಲ್ಲಿ ಸರ್ಕಸ್, ನಾಟಕ, ಯಕ್ಷಗಾನದಂಥಹ ಕಲೆಗಳು ಕಣ್ಮರೆಯಾಗುತ್ತಿವೆ. ಕಲಾವಿದರ ಪರಿಶ್ರಮಕ್ಕೆ ತಕ್ಕಂತೆ ಪ್ರತಿಫಲ, ಪ್ರೋತ್ಸಾಹ ಸಿಗದಿರುವುದೇ ಇಂತಹ ಕಲೆಗಳು ನಶಿಸಿ ಹೋಗುವುದಕ್ಕೆ ಕಾರಣವೂ ಆಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು. ಸರ್ಕಸ್ನ ವ್ಯವಸ್ಥಾಪಕ ಸುರೇಶಬಾಬು, ಗುರುರಾಜ ಕಂಬಳಿ, ಸುರೇಶ ಭಾನುವಳ್ಳಿ, ಮಂಜಯ್ಯ ಚಾವಡಿ, ಮಲ್ಲಣ್ಣ ಅಂಗಡಿ ಸೇರಿದಂತೆ ಇತರರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 