ಸಂವಿಧಾನಪೀಠದಲ್ಲಿ ಕರ್ನಾಟಕದ ನ್ಯಾಯಮೂರ್ತಿ
ನವದೆಹಲಿ, ನ 9 : ಇನ್ನು ಕೆಲವೇ ನಿಮಿಷಗಳಲ್ಲಿ ರಾಮ ಜನ್ಮಭೂಮಿ - ಬಾಬರಿ ಮಸೀದಿ ಭೂ ವಿವಾದದ ಅಂತಿಮ ತೀಪು ಸುಪ್ರೀಂಕೋರ್ಟ್ ನ ಸಂವಿಧಾನ ಪೀಠದಿಂದ ಪ್ರಕಟವಾಗಲಿದೆ. ಈ ಪೀಠದಲ್ಲಿ ಕರ್ನಾಟಕದ ನ್ಯಾಯಮೂರ್ತಿಯೊಬ್ಬರು ಇದ್ದಾರೆ ಎಂಬುದು ಮಹತ್ವದ ವಿಷಯವಾಗಿದೆ. ಸುಪ್ರೀಂಕೋರ್ಟ್ ನ 46 ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೋಗಾಯ್ ಇದೇ 17 ರಂದು ಅಧಿಕಾರದಿಂದ ನಿವೃತ್ತರಾಗುತ್ತಿದ್ದಾರೆ. ಮೂಲತಃ ಅಸ್ಸಾಂ ನವರಾದ ಗೊಗಾಯ್ ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದರು. ಇನ್ನು ಈ ಪೀಠದಲ್ಲಿರುವ ಮತ್ತೊಬ್ಬ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಇದೇ 18 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೋಬ್ಡೆ ಮಹಾರಾಷ್ಟ್ರದ ನಾಗಪುರದಲ್ಲಿ ಜನಿಸಿದವರು. ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿ ಮತ್ತು ಮಧ್ಯಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಕೆಲಸ ಮಾಡಿದ್ದಾರೆ. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಮೂಲತಃ ಕರ್ನಾಟಕದವರು ಎಂಬುದು ಮಹತ್ವದ ಸಂಗತಿಯಾಗಿದೆ. ಇನ್ನು ನ್ಯಾಯಮೂರ್ತಿ ಚಂದ್ರಚೂಡ್ ಬಾಂಬೆ ಹೈಕೋರ್ಟ, ಅಲಹಾಬಾದ್ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಪೀಠದಲ್ಲಿರುವ ಮತ್ತೊಬ್ಬ ನ್ಯಾಯಮೂರ್ತಿ ಅಶೋಕ್ ಭೂಷಣ್.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 