ಸಂವಿಧಾನಪೀಠದಲ್ಲಿ ಕರ್ನಾಟಕದ ನ್ಯಾಯಮೂರ್ತಿ
ನವದೆಹಲಿ, ನ 9 : ಇನ್ನು ಕೆಲವೇ ನಿಮಿಷಗಳಲ್ಲಿ ರಾಮ ಜನ್ಮಭೂಮಿ - ಬಾಬರಿ ಮಸೀದಿ ಭೂ ವಿವಾದದ ಅಂತಿಮ ತೀಪು ಸುಪ್ರೀಂಕೋರ್ಟ್ ನ ಸಂವಿಧಾನ ಪೀಠದಿಂದ ಪ್ರಕಟವಾಗಲಿದೆ. ಈ ಪೀಠದಲ್ಲಿ ಕರ್ನಾಟಕದ ನ್ಯಾಯಮೂರ್ತಿಯೊಬ್ಬರು ಇದ್ದಾರೆ ಎಂಬುದು ಮಹತ್ವದ ವಿಷಯವಾಗಿದೆ. ಸುಪ್ರೀಂಕೋರ್ಟ್ ನ 46 ನೇ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೋಗಾಯ್ ಇದೇ 17 ರಂದು ಅಧಿಕಾರದಿಂದ ನಿವೃತ್ತರಾಗುತ್ತಿದ್ದಾರೆ. ಮೂಲತಃ ಅಸ್ಸಾಂ ನವರಾದ ಗೊಗಾಯ್ ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದರು. ಇನ್ನು ಈ ಪೀಠದಲ್ಲಿರುವ ಮತ್ತೊಬ್ಬ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಇದೇ 18 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೋಬ್ಡೆ ಮಹಾರಾಷ್ಟ್ರದ ನಾಗಪುರದಲ್ಲಿ ಜನಿಸಿದವರು. ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿ ಮತ್ತು ಮಧ್ಯಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಕೆಲಸ ಮಾಡಿದ್ದಾರೆ. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಮೂಲತಃ ಕರ್ನಾಟಕದವರು ಎಂಬುದು ಮಹತ್ವದ ಸಂಗತಿಯಾಗಿದೆ. ಇನ್ನು ನ್ಯಾಯಮೂರ್ತಿ ಚಂದ್ರಚೂಡ್ ಬಾಂಬೆ ಹೈಕೋರ್ಟ, ಅಲಹಾಬಾದ್ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಪೀಠದಲ್ಲಿರುವ ಮತ್ತೊಬ್ಬ ನ್ಯಾಯಮೂರ್ತಿ ಅಶೋಕ್ ಭೂಷಣ್.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 