ನಿರ್ಭಯಾ ಅಪರಾಧಿಗಳಿಗೆ ಮರಣದಂಡನೆ ಜಾರಿಯಿಂದ ನ್ಯಾಯ ಗೆದ್ದಿದೆ : ಪ್ರಧಾನಿ
ನವದೆಹಲಿ, ಮಾ 20, ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಇಂದು ಮುಂಜಾನೆ ಗಲ್ಲು ಶಿಕ್ಷೆ ಜಾರಿಯಾಗಿದ್ದರ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ‘ನ್ಯಾಯ ಮೇಲುಗೈ ಸಾಧಿಸಿದ’ ಎಂದಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಪ್ರಧಾನಿ, ಸ್ತ್ರೀ ಸಬಲೀಕರಣದೊಡನೆ ಸುಸ್ಥಿರ ದೇಶ ನಿರ್ಮಾಣಕ್ಕೆ ಒತ್ತು ನೀಡಿದ್ದಾರೆ. “ನ್ಯಾಯ ಗೆದ್ದಿದೆ. ಮಹಿಳೆಯರ ಘನತೆ, ಸುರಕ್ಷತೆಯ ಭರವಸೆ ಅತ್ಯಗತ್ಯ. ನಮ್ಮ ನಾರಿಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದೆ” ಎಂದಿರುವ ಪ್ರಧಾನಿ, “ ಸ್ತ್ರೀ ಸಬಲೀಕರಣ, ಸಮಾನತೆ ಮತ್ತು ಅವಕಾಶಗಳ ಮೂಲಕ ದೇಶ ಕಟ್ಟುವತ್ತ ಗಮನ ನೀಡಬೇಕು” ಎಂದು ಹೇಳಿದ್ದಾರೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ಇಂದು ಮುಂಜಾನೆ 5.30ಕ್ಕೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 