ನಿರ್ಭಯಾ ಅಪರಾಧಿಗಳಿಗೆ ಮರಣದಂಡನೆ ಜಾರಿಯಿಂದ ನ್ಯಾಯ ಗೆದ್ದಿದೆ : ಪ್ರಧಾನಿ
ನವದೆಹಲಿ, ಮಾ 20, ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಇಂದು ಮುಂಜಾನೆ ಗಲ್ಲು ಶಿಕ್ಷೆ ಜಾರಿಯಾಗಿದ್ದರ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ‘ನ್ಯಾಯ ಮೇಲುಗೈ ಸಾಧಿಸಿದ’ ಎಂದಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಪ್ರಧಾನಿ, ಸ್ತ್ರೀ ಸಬಲೀಕರಣದೊಡನೆ ಸುಸ್ಥಿರ ದೇಶ ನಿರ್ಮಾಣಕ್ಕೆ ಒತ್ತು ನೀಡಿದ್ದಾರೆ. “ನ್ಯಾಯ ಗೆದ್ದಿದೆ. ಮಹಿಳೆಯರ ಘನತೆ, ಸುರಕ್ಷತೆಯ ಭರವಸೆ ಅತ್ಯಗತ್ಯ. ನಮ್ಮ ನಾರಿಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದೆ” ಎಂದಿರುವ ಪ್ರಧಾನಿ, “ ಸ್ತ್ರೀ ಸಬಲೀಕರಣ, ಸಮಾನತೆ ಮತ್ತು ಅವಕಾಶಗಳ ಮೂಲಕ ದೇಶ ಕಟ್ಟುವತ್ತ ಗಮನ ನೀಡಬೇಕು” ಎಂದು ಹೇಳಿದ್ದಾರೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ಇಂದು ಮುಂಜಾನೆ 5.30ಕ್ಕೆ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 