ಸಿದ್ಧಾರೂಢ ಸ್ವಾಮಿಗಳ ಜ್ಯೋತಿ ರಥಯಾತ್ರೆ
Jyoti Rathayatra of Siddharudh Swami
ಸಿದ್ಧಾರೂಢ ಸ್ವಾಮಿಗಳ ಜ್ಯೋತಿ ರಥಯಾತ್ರೆ
ಗದಗ 6 : ಸಿದ್ಧಾರೂಢ ಸ್ವಾಮಿಗಳ ನೂರ ತೊಂಬತ್ತನೆ ಹಾಗೂ ಶ್ರೀ ಗುರುನಾಥರೂಡರ 115 ನೇ. ಜಯಂತೋತ್ಸವದ ಅಂಗವಾಗಿ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮೀಟಿ ಹುಬ್ಬಳ್ಳಿ ಹಾಗೂ ವಿಶ್ವ ವೇದಾಂತ ಪರಿಷತ್ ವತಿಯಿಂದ ವಿಶ್ವ ಶಾಂತಿಗಾಗಿ ಆರೋಡ ಜ್ಯೋತಿ ಯಾತ್ರೆ ಹಾಗೂ ಶ್ರೀ ಸಿದ್ಧಾರೂಢ ಕಥಾಮೃತ ಮೆರವಣಿಗೆಯ ಶೋಭೆ ಯಾತ್ರೆ ರಾಜ್ಯಾದ್ಯಂತ ಹಾಗೂ ಮಹಾರಾಷ್ಟ್ರ ಆಂಧ್ರ ಗೋವಾ ರಾಜ್ಯಗಳ ಪ್ರಮುಖ ಸ್ಥಳಗಳಲ್ಲಿ ಸಂಚರಿಸಿ ಫೆಬ್ರವರಿ 20 ರಿಂದ 26 ರ ವರೆಗೆ ವಿಶ್ವ ಶಾಂತಿಗಾಗಿ ಸಮೃದ್ಧ ಭಾರತದ ನಿರ್ಮಾಣಕ್ಕಾಗಿ ಅನೇಕ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಆ ಪ್ರಯುಕ್ತ ಇದೇ ದಿನಾಂಕ 5 ರಂದು ಗದಗ ಬೆಟಗೇರಿ ಅವಳಿ ನಗರಕ್ಕೆ ಆಗಮಿಸಿದ ಜ್ಯೋತಿ ಯಾತ್ರೆಗೆ ಸನ್ಮಾನ್ಯ ಕಾನೂನು ಹಾಗೂ ಸಂಸದೀಯ ವ್ಯೆವಹಾರಗಳ, ಪ್ರವಾಸೋಧ್ಯೇಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ್, ಮಾಜೀ ಶಾಸಕರಾದ ಡಿ ಆರ್ ಪಾಟೀಲ್ ಇವರ ನೇತ್ರತ್ವದಲ್ಲಿ ಶ್ರೀ ಗಳ ಜ್ಯೋತಿ ಯಾತ್ರೆಯ ಭವ್ಯ ಸ್ವಾಗತವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ಕೈಗೊಳ್ಳಲಾಯಿತು. ಅದರಂತೆ ಮಹಿಳೆಯರಿಂದ ಶ್ರೀಗಳ ಜ್ಯೋತಿ ಯಾತ್ರೆಗೆ ಆರತಿ ಬೆಳಗುವ ಮೂಲಕ ಸ್ವಾಗತ ಮಾಡಲಾಯಿತು.
ಈ ಸಂಧರ್ಭದಲ್ಲಿ ಕಾಂಗ್ರೇಸ್ ಮಹಿಳಾ ಮುಖಂಡರಾದ ದ್ರಾಕ್ಷಾಯಣಿ ಹಾಸಲಕರ, ನಗರಸಭಾ ಸದಸ್ಯರಾದ ಶಕುಂತಲಾ ಅಕ್ಕಿ, ಪರ್ವೀನ್ ಬಾನು ಮುಲ್ಲಾ, ಲಕ್ಷ್ಮೀ ಸಿದ್ದಮ್ಮನಹಳ್ಳಿ, ಸಾವಿತ್ರಿ ಹೂಗಾರ, ಸುಧಾ ಬೂದಾರಪೂರ, ಸರಸ್ವತಿ ದೇವರಕೊಂಡಿ, ಲಲಿತಾ ಗೋಳಗೊಳಕಿ, ಲಕ್ಷ್ಮೀ ಜಾಲಿಗಂಡಿ, ರಾಜೇಶ್ವರಿ, ಕುಸುಮಾ, ಶೈಲಾ ಜ್ಯೋಶಿ, ಶೋಭಾ, ಬಾಳಮ್ಮ ಕಮಲಾ ಹಾದಿಮನಿ, ಮುಸ್ತಾನ್ ಸೈದ್, ಗೀತಾ ಹಬೀಬಿ ಹಾಗೂ ಇನ್ನಿತರರ ಉಪಸ್ಥಿತಿಯಲ್ಲಿ ಶ್ರೀ ಗಳ ಭವ್ಯ ಜ್ಯೋತಿ ಯಾತ್ರೆಗೆ ಆರತಿ ಬೆಳಗಿಸುವ ಮೂಲಕ ಸ್ವಾಗತ ಕೋರಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 