ಕೆ.ಎಂ.ನಾಗರಳ್ಳಿ ನಿಧನ
K.M. Nagaralli passes away
ಹುಬ್ಬಳ್ಳಿ ,ಮಾರ್ಚ್ 11: ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದ ಕಲ್ಲಪ್ಪ ಮಹದೇವಪ್ಪ ನಾಗರಳ್ಳಿ (71) ಮಂಗಳವಾರ ಮಾರ್ಚ್ 11 ಮಧ್ಯಾಹ್ನ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಡಿಮೆ ರಕ್ತದೊತ್ತಡದಿಂದ ಕೊನೆಯುಸಿರೆಳೆದರು.
ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ರೊಟ್ಟಿಗವಾಡ ಗ್ರಾಮದ ಜಿಇಸಿ ಜಿ.ಕೆ.ಹಿರೇಗೌಡರ ಪ್ರೌಢಶಾಲೆಯ ಗಣಿತ ಶಿಕ್ಷಕರಾಗಿ ಸುಮಾರು 3 ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಅವರು ರೊಟ್ಟಿಗವಾಡ, ಕೊಂಕಣ ಕುರಹಟ್ಟಿ, ಉಮಚಗಿ ಸೇರಿದಂತೆ ಸುತ್ತಲಿನ ಅನೇಕ ಗ್ರಾಮಗಳಲ್ಲಿ ದೊಡ್ಡ ವಿದ್ಯಾರ್ಥಿ ಬಳಗ ಹೊಂದಿದ್ದಾರೆ.
ಪಾರ್ಥಿವ ಶರೀರದ ಅಂತ್ಯಕ್ರಿಯೆ ಸ್ವಗ್ರಾಮ ಯರಿನಾರಾಯಣಪುರದಲ್ಲಿ ಇಂದು ಮಾರ್ಚ್ 12 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 