ಕು.ಎಸ್.ಕೃತಿ ಕರಾಟೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
K.S.Kriti selected for national level in karate
ದೇವರಹಿಪ್ಪರಗಿ 20: ಪಟ್ಟಣದ ಸಿದ್ದಪ್ಪ ಭೈರವಾಡಗಿ ಅವರ ಪುತ್ರಿ ಕುಮಾರಿ ಎಸ್. ಕೃತಿ, 07 ವಯೋಮಿತಿಯ ಬಾಲಕಿಯರ 20 ಕೆ.ಜಿ ಕರಾಟೆ (ಫೈಟ್) ವಿಭಾಗದಲ್ಲಿ ರಾಜ್ಯದ ಪರವಾಗಿ ಆಡಿ ಪ್ರಥಮ ಸ್ಥಾನ (ಬಂಗಾರ ಪದಕ) ಪಡೆಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಅಖಿಲ ಕರ್ನಾಟಕ ಸ್ಪೋರ್ಟ್ಸ ಕರಾಟೆ ಅಸೋಸಿಯೇಷನ್, ಆಯೋಜಿಸಲಾದ 17ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಬೆಂಗಳೂರು ನಗರದ ಕೋರಮಂಗಲ ಒಳಾಂಗಣದ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರಾಟೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಪ್ರತಿಭೆಯನ್ನು ಹೊರ ಹಾಕಿದ್ದಾರೆ.ಕುಮಾರಿಯ ಈ ಸಾಧನೆಗೆ ಸಂಸ್ಥೆಯ ಮುಖ್ಯ ತರಬೇತಿದಾರರಾದ ಪ್ರೇಮಾನಂದ ನಾಗರೇಶಿ, ತರಬೇತಿದಾರರಾದ ಅಕ್ಷಯ ಕುಮಾರ ಹಿರೇಮಠ, ಸಾಗರ.ಎಸ್.ಆರ್ ಹಾಗೂ ಎಲ್ಲಾ ಕರಾಟೆ ಪಟುಗಳು ಪಾಲಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 