ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆ

ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆ KCC Saturation Campaign Launched

ಲೋಕದರ್ಶನ ವರದಿ 

 ಕಾರವಾರ ಜುಲೈ 16: ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಡಿಸಿಸಿ ಸಭೆ ಬುಧವಾರ ನಡೆಯಿತು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್‌. ಅಲ್ಲಾಬಕ್ಷ್‌ ಹಾಗೂ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.  

ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನವು ಆಗಸ್ಟ್‌ 14, 2026ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದ್ದು, ಅಭಿಯಾನವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಅರ್ಹ ಎಲ್ಲ ಫಲಾನುಭವಿಗಳಿಗೆ ಬೆಳೆ ವಿಮೆ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.  ವಿವಿಧ ಇಲಾಖೆಗಳ ಅಧಿಕಾರಿಗಳು ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.  

ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಗೌಳಿ ಅವರು ಕೆ.ಸಿ.ಸಿ ಸ್ಯಾಚುರೇಶನ್ ಅಭಿಯಾನದ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಅಭಿಯಾನದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು.  

ಸಭೆಯಲ್ಲಿ ಜಿಲ್ಲೆಯ ಎಲ್ಲ ಬ್ಯಾಂಕ್ಗಳ ಜಿಲ್ಲಾ ಸಂಯೋಜಕರು, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಬೆಳೆ ವಿಮೆ ಪ್ರತಿನಿಧಿಗಳು, ಸಿಎಫ್‌ಎಲ್ ಹಾಗೂ ಎಫ್‌ಎಲ್ಸಿ ಜಿಲ್ಲಾ ಸಂಯೋಜಕರು ಭಾಗವಹಿಸಿದ್ದರು.