ಬೆಳಗಾವಿ 24: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 25ನೆ ಏಪ್ರಿಲ್ 2025 ರಂದು ಸಂಜೆ 5 ರಿಂದ 6 ಗಂಟೆ ವರೆಗೆ ಮಧುಮೇಹ: ಲಕ್ಷಣಗಳು, ಕಾರಣ ಮತ್ತು ಚಿಕಿತ್ಸೆ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಡಾ. ಎಂ. ವಿ. ಜಾಲಿ, ಮಧುಮೇಹ ತಜ್ಞವೈದ್ಯರು, ನಿರ್ದೇಶಕರು, ಮಧುಮೇಹ ಕೇಂದ್ರ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಬೆಳಗಾವಿ ಹಾಗೂ ವೈದ್ಯಕೀಯ ನಿರ್ದೇಶಕಕರು, ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ, ಬೆಳಗಾವಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಈಗ ಮೊಬೈಲ್ ಆಫ್ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ ಎಸ್. ಜಲಾಲಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.