ಕೆಎಲ್ಇ ಸಂಸ್ಥೆಯ ಚುನಾವಣೆ ಅವಿರೋಧ ಆಯ್ಕೆ
KLE election unopposed
ಬೆಳಗಾವಿ 23 : ಬಹು ನೀರೀಕ್ಷಿತ ಕೆಎಲ್ಇ ಸಂಸ್ಥೆಯ ಚುನಾವಣೆಯು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮತ್ತೊಂದು ಇತಿಹಾಸವನ್ನು ಸೃಷ್ಟಿಸಿದೆ. ದಿನಾಂಕ 22 ಜನವರಿ 2026 ರಂದು ನಾಮಪತ್ರ ಹಿಂಪಡೆಯುವ ದಿನದಂದು ಕಣಕ್ಕೆನಿಂತ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ.
ಕೆಎಲ್ಇ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಮಹಾಂತೇಶ ಶಿವಾನಂದ ಕೌಜಲಗಿ, ಉಪಾಧ್ಯಕ್ಷರಾಗಿ ಬಸವರಾಜ ಶಿವಲಿಂಗಪ್ಪ ತಟವಟಿಮರು ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯನೂತನಸದಸ್ಯರಾಗಿ ಅಮಿತ ಪ್ರಭಾಕರ ಕೋರೆ, ಪ್ರವೀಣ ಅಶೋಕ ಬಾಗೇವಾಡಿ, ಪ್ರೀತಿಕರಣ ದೊಡವಾಡ, ಮಹಾಂತೇಶಮಲ್ಲಿಕಾರ್ಜುನ ಕವಟಗಿಮಠ, ಮಲ್ಲಿಕಾರ್ಜುನ ಚನಬಸಪ್ಪಕೊಳ್ಳಿ, ವಿಜಯ ಶ್ರೀಶೈಲಪ್ಪ ಮೆಟಗುಡ್, ಜಯಾನಂದ ಊರ್ಫ್ರಾಜು ಮಹಾದೇವಪ್ಪಮುನವಳ್ಳಿ, ಮಂಜುನಾಥ ಶಂಕರ್ಪಮುನವಳ್ಳಿ, ಬಸವರಾಜ ರುದ್ರಗೌಡ ಪಾಟೀಲ, ವಿಶ್ವನಾಥ ಈರನಗೌಡ ಪಾಟೀಲ, ಯಲ್ಲನಗೌಡ ಶಿವಮೊಗ್ಗೆಪ್ಪ ಪಾಟೀಲ ಹಾಗೂ ಅನೀಲ ವಿಜಯಬಸಪ್ಪ ಪಟ್ಟೇದ ಆಯ್ಕೆಯಾಗಿದ್ದಾರೆ.
ಆದ್ದರಿಂದ ಸೊಸಾಯಿಟಿಯ ಎಲ್ಲ ಸದಸ್ಯರ ಗಮನಕ್ಕೆ ಈ ಪ್ರಕಟಣೆಯ ಮೂಲಕ ಶನಿವಾರ 7 ಫೆಬ್ರುವರಿ 2026 ರಂದು ಹುಬ್ಬಳ್ಳಿಯ ಬಿ.ವ್ಹಿ.ಭೂಮರಡ್ಡಿ ಅಭಿಯಾಂತ್ರಿಕ ಹಾಗೂ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಹಾಗೂ ರವಿವಾರ 8ನೇ ಫೆಬ್ರುವರಿ 2026 ರಂದು ಬೆಳಗಾವಿಯ ಲಿಂಗರಾಜ ಮಹಾವಿದ್ಯಾಲಯದ ಆವರಣದಲ್ಲಿ ಸೊಸಾಯಿಟಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕಾಗಿದ್ದ ಮತದಾನವನ್ನು ರದ್ದುಪಡಿಸಲಾಗಿದೆ ಎಂದು ಚುನಾವಣಾಧಿಕಾರಿ ಡಾ.ಎಸ್.ಎಸ್.ಜಲಾಲಪುರೆ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 