ಪಕ್ಷದ ವಿರುದ್ಧ ಟೀಕೆ: ಡಿಎಂಕೆಯಿಂದ ಕೆ.ಪಿ.ರಾಮಲಿಂಗಂ ಅಮಾನತು
ಚೆನ್ನೈ, ಏ.2,ಪಕ್ಷದ ಮಾಜಿ ಸಂಸದ ಹಾಗೂ ಕೃಷಿ ವಿಭಾಗದ ಕಾರ್ಯದರ್ಶಿ ಕೆ.ಪಿ.ರಾಮಲಿಂಗಂ ಅವರನ್ನು ವಿಪಕ್ಷ ಡಿಎಂಕೆ ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.
ಕೆಲವು ದಿನಗಳ ಹಿಂದೆ ಪಕ್ಷದ ಎಲ್ಲಾ ಹುದ್ದೆಗಳಿಂದ ಅವರನ್ನು ತೆಗೆದುಹಾಕಲಾಗಿತ್ತು. ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಪಕ್ಷಕ್ಕೆ ಅಪಖ್ಯಾತಿ ತರುವ ರೀತಿಯಲ್ಲಿ ವರ್ತಿಸಿದ್ದಕ್ಕಾಗಿ ರಾಮಲಿಂಗಂ ಅವರನ್ನು ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ
ಎಂದು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ ಬಗ್ಗೆ ಸರ್ವ ಪಕ್ಷ ಸಭೆ ಕರೆಯುವಂತೆ ಸ್ಟಾಲಿನ್ ಮಾಡಿದ್ದ ಆಗ್ರಹದ ವಿರುದ್ಧ ಟೀಕೆ ಮಾಡಿದ್ದ ಕಾರಣಕ್ಕೆ ರಾಮಲಿಂಗಂ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ಮುಕ್ತಗೊಳಿಸಲಾಗಿದೆ ಎಂದು ಪಕ್ಷದ ನಿರ್ಧಾರವನ್ನು ಡಿಎಂಕೆ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ಕೆ.ಅಳಗಿರಿ ಬೆಂಬಲಿಸಿದ್ದಾರೆ.ರಾಜ್ಯದಲ್ಲಿ ಕೊರೋನವೈರಸ್ ಹರಡುವುದನ್ನು ನಿಭಾಯಿಸುವ ಬಗ್ಗೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎಲ್ಲ ಪಕ್ಷದ ಮುಖಂಡರ ಸಭೆ ಕರೆಯಿರಿ ಎಂದು ಸ್ಟಾಲಿನ್ ಅವರು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿಯನ್ನು ಒತ್ತಾಯಿಸಿದ್ದರು. ಆದರೆ ರಾಮಲಿಂಗಂ ಇದರ ವಿರುದ್ಧ ಟೀಕೆ ಮಾಡುವ ಮೂಲಕ ಹೈಕಮಾಂಡ್ನಿಂದ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 