ಛಾಯಾಗ್ರಾಹಕ ನಾಗರಾಜ ಸೂರಣಗಿ ಅವರಿಗೆ ಕೆಪಿಎ ಛಾಯಾಭೂಷಣ ಪ್ರಶಸ್ತಿ

ಛಾಯಾಗ್ರಾಹಕ ನಾಗರಾಜ ಸೂರಣಗಿ ಅವರಿಗೆ ಕೆಪಿಎ ಛಾಯಾಭೂಷಣ ಪ್ರಶಸ್ತಿ KPA Chhayabhushana Award for photographer Nagaraja Suranagi


ಲಕ್ಷ್ಮೇಶ್ವರ, .16: ಛಾಯಾಗ್ರಹಣ ಕ್ಷೇತ್ರ ಹಾಗೂ ಛಾಯಾಗ್ರಾಹಕ ಸಂಘಟನೆಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಲಕ್ಷ್ಮೇಶ್ವರ ತಾಲ್ಲೂಕಿನ ಛಾಯಾಗ್ರಾಹಕ ನಾಗರಾಜ ಟಿ. ಸೂರಣಗಿ ಅವರಿಗೆ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ವತಿಂದ ರಾಜ್ಯಮಟ್ಟದ ಕೆಪಿಎ ಛಾಯಾಭೂಷಣ ಪ್ರಶಸ್ತಿ ನೀಡಿ ಗೌರ"ಸಲಾಗುತ್ತಿದೆ

187ನೇ "ಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಕೆಪಿಎ ಛಾಯಾಭೂಷಣ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 19ರಂದು ಸಂಜೆ 5.30ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾ"ತ್ಯ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ

ಛಾಯಾಗ್ರಹಣ ಕ್ಷೇತ್ರ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಲ್ಲಿಸಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ನಾಗರಾಜ ಸೂರಣಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘ ತಿಳಿಸಿದೆ

ಸಂದರ್ಭದಲ್ಲಿ ಗದಗ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು ಹರ್ಷ ವ್ಯಕ್ತಪಡಿಸಿ, ನಾಗರಾಜ ಸೂರಣಗಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.