ದೆಹಲಿ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಇತ್ಯರ್ಥ: ಎಂ.ಬಿ.ಪಾಟೀಲ್
ಬೆಂಗಳೂರು, ಫೆ.7, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರ ಯಥಾಸ್ಥಿತಿಯಲ್ಲಿದ್ದು, ದಿನೇಶ್ ಗುಂಡೂರಾವ್ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆ ಅಂಗೀಕಾರವೂ ಆಗಿಲ್ಲ, ತಿರಸ್ಕಾರವೂ ಆಗಿಲ್ಲ. ರಾಜೀನಾಮೆ ಇತ್ಯರ್ಥವಾಗುವವರೆಗೂ ಯಾವುದೂ ಸಾಧ್ಯವಿಲ್ಲ. ದೆಹಲಿ ಚುನಾವಣೆ ಬಳಿಕ ಈ ಗೊಂದಲ ಪರಿಹಾರವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್ ಪ್ರತಿದಿನ ಕಚೇರಿಗೆ ಹೋಗುತ್ತಾರೆ. ಪಕ್ಷ ಸಂಘಟನೆಗೆ ಯಾವುದೇ ಸಮಸ್ಯೆಯಿಲ್ಲ. ದಿನೇಶ್ ಗುಂಡೂರಾವ್ ಅವರೇ ಮುಂದುವರಿಯಬಹುದು. ಸಿದ್ದರಾಮಯ್ಯ ವಿಪಕ್ಷ ಶಾಸಕಾಂಗ ನಾಯಕರಾಗಿ ಮುಂದುವರಿಕೆಗೂ ಅವಕಾಶವಿದೆ ಎಂದರು.
ಮೇಲ್ಮನೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಂದು ಯಾರನ್ನೂ ಕಣಕ್ಕಿಳಿಸಿಲ್ಲ.ತಾವು ಸೂಚಕರಾಗಿ ಸಹಿ ಹಾಕಿಲ್ಲ. ಕಾಂಗ್ರೆಸ್ ಸಹಿ ಹಾಕಿಲ್ಲ. ಯಾರ ಪರವೂ ವಹಿಸಿಲ್ಲ. ಈ ಬಗ್ಗೆ ಪಕ್ಷದ ಹಿರಿಯರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.ಪುರಭವನದ ಎದುರು ಪ್ರತಿಭಟನೆ ಮಾಡುವವರು ಹತ್ತು ಲಕ್ಷ ಬಾಂಡ್ ಕೊಡಬೇಕು ಎಂಬ ಸರ್ಕಾರದ ತೀರ್ಮಾನ ಮೂರ್ಖತನದ ಪರಮಾವಧಿ. ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟಗಾರರು. ಪ್ರತಿಭಟನೆಗೆ ಅವಕಾಶ ವಿಲ್ಲ ಎಂದರೆ ಹೇಗೆ ? ಎಂದು ಪ್ರಶ್ನಿಸಿದರು. ಸಚಿವ ಸಂಪುಟ ವಿಸ್ತರಣೆ ವಿಚಾರ ಬಿಜೆಪಿಯ ಆಂತರಿಕ ವಿಚಾರ. ಇನ್ನು ಎಂಟಿಬಿ, ಪ್ರತಾಪ್ ಗೌಡ, ಮುನಿರತ್ನ ಇದ್ದಾರೆ. ಅವರಿಗೂ ಅವಕಾಶ ಸಿಕ್ಕ ನಂತರವೇ ಅವರಿಗೆಲ್ಲ ಸಮಾಧಾನ ಎಂದು ಸೂಚ್ಯವಾಗಿ ತಿಳಿಸಿದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 