ಕೆಪಿಎಲ್ ಬೆಟ್ಟಿಂಗ್: ಸಂತೋಷ್ ಮೆನನ್ ನಿವಾಸದ ಮೇಲೆ ಸಿಸಿಬಿ ದಾಳಿ
ಬೆಂಗಳೂರು, ಡಿ. 19 ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ಮೆನನ್ ನಿವಾಸದ ಮೇಲೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ಕೈಗೊಂಡಿದೆ. ಕೆಪಿಎಲ್ ಫೈನಲ್ಸ್ನಲ್ಲಿ ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಫಿಕ್ಸಿಂಗ್ ನಡೆದಿದೆ ಎನ್ನಲಾಗಿದೆ. ಕಳೆದ ವರ್ಷವೂ ಫಿಕ್ಸಿಂಗ್ ನಡೆದಿತ್ತು ಎನ್ನಲಾಗಿದೆ. ಇದುವರೆಗೆ ಕೆಪಿಎಲ್ ತಂಡಗಳ ಸುತ್ತಲೇ ನಡೆಯುತ್ತಿದ್ದ ತನಿಖೆ ಕೆಎಸ್ಸಿಎ ಅಂಗಣಕ್ಕೂ ಪ್ರವೇಶಿಸಿದೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರಿನಲ್ಲಿರುವ ಕೆಎಸ್ಸಿಎ ಕಾರ್ಯದರ್ಶಿ ಮನೆಗೂ ಸಿಸಿಬಿ ಪೊಲೀಸರು ದಾಳಿ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 