KPSC ಅವ್ಯವಸ್ಥೆ: ಬಿವೈ ವಿಜಯೇಂದ್ರ ಆರೋಪ
KPSC chaos: B Y Vijayendra alleges
ಬೆಂಗಳೂರು 06: ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಇದೀಗ ಮತ್ತೊಂದು ಪ್ರಮಾದವೆಸಗಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿ ಸಾರ್ವಜನಿಕ ವಲಯದಲ್ಲೂ ಆಕ್ರೋಶಕ್ಕೆ ಗುರಿಯಾಗಿದೆ.
ಸೋಮವಾರ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದ್ದು, ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರೂ ಸಹ ಒಪ್ಪಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ. ಕರ್ನಾಟಕ ಲೋಕಸೇವಾ ಆಯೋಗವು ಪದೇ ಪದೇ ಎಡವಟ್ಟುಗಳು, ಗೊಂದಲಗಳನ್ನು ಸೃಷ್ಟಿಸಿ ದೇಶದೆದುರು ಕರ್ನಾಟಕದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ದುರಂತದ ದೌರ್ಭಾಗ್ಯವೇ ಸರಿ ಎಂದಿದ್ದಾರೆ.
ಈ ಕೂಡಲೇ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳು ಬರುವ ಮುನ್ನವೇ ಬಂಡಲ್ ತೆರೆದಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳಿಗಾಗುತ್ತಿರುವ ಬಹುದೊಡ್ಡ ಅನ್ಯಾಯ, ದ್ರೋಹಗಳನ್ನು ಸರಿಪಡಿಸದಿದ್ದರೆ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ತೆರಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 