ಗಾಯಾಳು ರಿಷಭ್ ಪಂತ್ ಸ್ಥಾನಕ್ಕೆ ಕೆ.ಎಸ್ ಭರತ್
ಜ್ ಕೋಟ್, ಜ 17 : ಆಸ್ಟ್ರೇಲಿಯಾ ವಿರುದ್ಧ ಇನ್ನುಳಿದ ಎರಡು ಪಂದ್ಯಗಳಿಗೆ ಗಾಯಾಳು ರಿಷಭ್ ಪಂತ್ ಅವರ ಬದಲು ಆಂಧ್ರ ಪ್ರದೇಶ ವಿಕೆಟ್ ಕೀಪರ್ ಕೆ.ಎಸ್ ಭರತ್ ಅವರನ್ನು ತುರ್ತು ವಿಕೆಟ್ ಕೀಪರ್ ಆಟಗಾರನಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಪಂದ್ಯದಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದರು. ಆ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿತ್ತು. ಸದ್ಯ ರಿಷಭ್ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆಇಂದಿನ ಪಂದ್ಯಕ್ಕೆ ಪಂತ್ ಅಲಭ್ಯರಾಗಿದ್ದು, ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಅವರ ಗಾಯದ ಪ್ರಮಾಣವನ್ನು ಆಧರಿಸಿ ತಡವಾಗಿ ಲಭ್ಯತೆ ಬಗ್ಗೆ ತಿಳಿಯಲಿದೆ.ಮೊದಲನೇ ಪಂದ್ಯದಂತೆ ಕೆ.ಎಲ್ ರಾಹುಲ್ ವಿಕೆಟ್ ಇಂದಿನ ಪಂದ್ಯದಲ್ಲಿ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಕೆ.ಎಸ್ ಭರತ್ ಹೆಚ್ಚುವರಿ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಪಂದ್ಯದಲ್ಲಿ ರಿಷಭ್ ಪಂತ್ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಪ್ಯಾಟ್ ಕಮಿನ್ಸ್ ಎಸೆತದಲ್ಲಿ ಹೆಲ್ಮೇಟ್ ಗೆ ಚೆಂಡು ತಾಗಿತ್ತು. ಬಳಿಕ ಅವರು ಅಂಗಳದಿಂದ ಹೊರ ನಡೆದಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 