ಕೆ.ಎಸ್‌.ಆರ್‌.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದೆ

ಕೆ.ಎಸ್‌.ಆರ್‌.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದೆ KSRTC bus driver loses control and veers off the road

ಶಿರಹಟ್ಟಿ   03: ತಾಲೂಕಿನ ಮಜ್ಜೂರಹಿಮಾಚೇನಹಳ್ಳಿ ಮಧ್ಯದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಬಸ್ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ತಪ್ಪಿದೆ. 

ಗದಗ ನಗರದಿಂದ ಕೇರಳ್ಳಿ ತಾಂಡಾಕ್ಕೆ ತೆರಳುತ್ತಿದ್ದ ಕೆ.ಎಸ್‌.ಆರ್‌.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದ ಪರಿಣಾಮ ಈ ಘಟನೆ ಸಂಭವಿಸಿದೆ. ಬಸ್ ಉರುಳಿದ ತಕ್ಷಣ ಸ್ಥಳೀಯರು ಹಾಗೂ ಸರ್ವೇ ಸಾಮಾನ್ಯರು ನೆರವಿಗೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದು ತಕ್ಷಣವೇ ಶಿರಹಟ್ಟಿ ತಾಲೂಕು ಆಸ್ಪತ್ರೆಗೆ ಕಳುಹಿಸಿದ್ದಾರೆ. 

ಅಪಘಾತದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಗಮನಾರ್ಹ. ಘಟನಾ ಸ್ಥಳಕ್ಕೆ ಶಿರಹಟ್ಟಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. 

ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಎಲ್ಲರಿಗೂ ಅಗತ್ಯವಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಾಲೂಕು ಆಸ್ಪತ್ರೆ ಮೂಲಗಳು ತಿಳಿಸಿವೆ.ಅಪಘಾತದಿಂದ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ ನಂತರ ಸಂಚಾರವನ್ನು ಸರಳಗೊಳಿಸಲಾಗಿದೆ.ಶಿರಹಟ್ಟಿ ತಾಲೂಕಿನ ಮಜ್ಜೂರಹಿಮಾಚೇನಹಳ್ಳಿ ಮಧ್ಯದಲ್ಲಿ ಕೆ.ಎಸ್‌.ಆರ್‌.ಟಿ.ಸಿ ಬಸ್ ರಸ್ತೆ ಪಕ್ಕಕ್ಕೆ ಉರುಳಿದ ರಸ್ತೆ ಪಕ್ಕಕ್ಕೆ ಉರುಳಿದೆ.