ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ:ಬಹುಮಾನ ವಿತರಣೆ
ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.29 ರ ಬುಧವಾರ ಸರಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನ ನೌಕರರ ಕ್ರೀಡಾಕೂಟದಲ್ಲಿ ಬೀರಪ್ಪ ಅಂಡಗಿ ನಾಯಕತ್ವದ ಕಬ್ಬಡ್ಡಿ ತಂಡ ಪ್ರಥಮ ಪಡೆದಿದೆ.
ಕಬ್ಬಡ್ಡಿ ಸ್ಪರ್ಧೆಯಲ್ಲಿ ಕೊಪ್ಪಳ ಹಾಗೂ ಕುಷ್ಟಗಿ ತಂಡಗಳ ಮಧ್ಯ ಸ್ಪರ್ಧೆ ನಡೆಯಿತು.ಕೊನೆಯಲ್ಲಿ ಕೊಪ್ಪಳ ತಂಡ ಜಯ ಸಾಧಿಸಿದೆ. ಕೊಪ್ಪಳ ತಂಡದಲ್ಲಿ ಬೀರಪ್ಪ (ತಂಡ ನಾಯಕ),ಆಟಗಾರರಾಗಿ ಮಂಜುನಾಥ.ಎಚ್.,ಬಸವರಾಜ ಮಾರನಬಸರಿ, ಮಂಜುನಾಥ ಬುಲ್ಟಿ,ನಾಗಪ್ಪ ದೇವನಾಳ,ವಿರುಪಾಕ್ಷಪ್ಪ,ಅಂದಪ್ಪ ಇದ್ಲಿ ಭಾಗವಹಿಸಿದ್ದರು.
ಪ್ರಥಮ ಸ್ಥಾನ ಪಡೆದ ಕೊಪ್ಪಳ ತಂಡಕ್ಕೆ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ.ಆರ್.ಜುಮ್ಮಣ್ಣನ್ನವರ ಹಾಗೂ ಯುವಜನ ಸೇವೆ ಮತ್ತು ಕ್ರೀಡಾಕೂಟ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಜಿ.ನಾಡಗೇರ ಬಹುಮಾನ ವಿತರಣೆ ಮಾಡಿದರು.
ಈ ಸಮಯದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ,ಖಜಾಂಚಿ ಸುಶಿಲೇಂದ್ರರಾವ ದೇಶಪಾಂಡೆ,ಕಾರ್ಯಾಧ್ಯಕ್ಷರಾದ ಶಿವಪ್ಪ ಜೋಗಿ,ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಅಂದಪ್ಪ ಬೋಳರಡ್ಡಿ,ಖಜಾಂಚಿ ಕಾಶಿನಾಥ ಶಿರಿಗೇರಿ,ಉಪಾಧ್ಯಕ್ಷರಾದ ಹೆಚ್.ಆರ್.ಹಂಜಕ್ಕಿ,ಪಿಡ್ಡನಗೌಡ ಹಾಗೂ ಶಿಕ್ಷಕರಾದ ಯಲಪ್ಪ ಹಾಜರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 