ಕಲಬುರಗಿ ಇನ್ನು ಬೆಂಗಳೂರಿಗೆ ಬಹಳ ಹತ್ತಿರ..!!
ಕಲಬುರಗಿ, ಆ. 25 ಕಲಬುರಗಿ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆ ಉದ್ದೇಶಕ್ಕಾಗಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ಶನಿವಾರ ಹಸ್ತಾಂತರ ಮಾಡಲಾಗಿದೆ. ಇದರಿಂದ ಹಿಂದುಳಿದ ಹೈದರಾಬಾದ್-ಕರ್ನಾಟಕ ಪ್ರದೇಶ ಈಗ ಬೆಂಗಳೂರಿಗೆ ಬಹಳ ಹತ್ತಿರವಾಗಿದ್ದು ಈ ಭಾಗದ ಜನರು ರಾಜಧಾನಿಯ ಜೊತೆ ಹೆಚ್ಚಿನ ಒಡನಾಟ ಇಟ್ಟುಕೊಳ್ಳಲು ಸಹಕಾರಿಯಾಗಲಿದೆ. ಜೊತೆಗೆ ಬಹಳ ಹತ್ತಿರವಾಗಲಿದೆ.!! ಕಲಬುರಗಿ ವಿಮಾನ ನಿಲ್ದಾಣವನ್ನು ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ವಿಮಾನ ಕಾರ್ಯಾಚರಣೆಗಾಗಿ ಆಯ್ಕೆ ಮಾಡಲಾಗಿದೆ. ಅಲೈಯನ್ಸ್ ಏರ್ ಮತ್ತು ಘೋಡವತ್ ಏರ್ ಪ್ರೈವೇಟ್ ಲಿಮಿಟೆಡ್ ಕಲಬುರಗಿ-ಬೆಂಗಳೂರು-ಕಲಬುರಗಿ, ಕಲಬುರಗಿ-ಹಿಂಡನ್-ಕಲಬುರಗಿ ಮತ್ತು ಕಲಬುರಗಿ-ತಿರುಪತಿ-ಕಲಬುರಗಿ ಮಾರ್ಗಗಳಿಗೆ 'ಆಯ್ದ ವಿಮಾನಯಾನ ಆಪರೇಟರ್ (ಎಸ್ಎಒ) ಎಂಬ ಅರ್ಹತೆ ಪಡೆದಿವೆ ಎಂದು ಸರಕಾರಿ ಹೇಳಿಕೆ ತಿಳಿಸಿದೆ. ಸರ್ಕಾರಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರದ ನಡುವೆ ಈ ಕುರಿತು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ. ಇದರ ಪರಿಣಾಮವಾಗಿ,ಇನ್ನು ಮುಂದೆ ಕಲಬುರಗಿ ವಿಮಾನ ನಿಲ್ದಾಣವನ್ನು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿವೃದ್ಧಿಪಡಿಸಿ, ನಿರ್ವಹಣೆ ಮಾಡಲಿದೆ. ಮಾರ್ಚ್ 2007 ರಲ್ಲಿ ಕಲಬುರಗಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ ಸರಕಾರ ಸಮ್ಮತಿ ನೀಡಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 