ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ   Kalyana Karnataka Utsav Celebration

ಬಳ್ಳಾರಿ 17: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು  ಧ್ವಜಾರೋಹಣದ ಮೂಲಕ ಆಚರಿಸಲಾಯಿತು.                     

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮಹಾತ್ಮಾ ಗಾಂಧೀಜಿ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಇವರ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ, ಸಂಸ್ಥೆಯ  ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿರವರು ರಾಷ್ಟ್ರಧ್ವಜಾರೋಹಣ ನೇರವೇರಿಸಿದರು.   

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ್, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಉಪಸಮಿತಿಗಳ ಚೇರ್‌ಮನ್‌ಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.