ಕಂಪ್ಲಿ: ನವಕರ್ನಾಟಕ ಯುವಶಕ್ತಿ ಸಂಘ ಪ್ರತಿಭಟನೆ
ಲೋಕದರ್ಶನ ವರದಿ
ಕಂಪ್ಲಿ 22: ಸುರಕ್ಷತಾ ಪರಿಕರ ನೀಡದೆ ನಂ.10 ಮುದ್ದಾಪುರ ಗ್ರಾಮದ ವಿಜಯನಗರ ಕಾಲುವೆಯಲ್ಲಿ ಖಾತ್ರಿ ಕಾಮರ್ಿಕರಿಂದ ಗಿಡಗಂಟಿ ತೆರವು ಕಾರ್ಯಕ್ಕೆ ಮುಂದಾಗಿರುವ ಗ್ರಾಪಂ ಕ್ರಮ ಖಂಡಿಸಿ ಸ್ಥಳೀಯ ನವ ಕರ್ನಾಟಕ ಯುವಶಕ್ತಿ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.
ಸಂಘದ ಕ್ಷೇತ್ರಾಧ್ಯಕ್ಷ ಬಿ.ವಿರೂಪಾಕ್ಷಿ ಮಾತನಾಡಿ, ಗ್ರಾಮದ ವಿಜಯನಗರ ಕಾಲುವೆಗೆ ಚರಂಡಿ ನೀರು ಹರಿಸಲಾಗುತ್ತಿದೆ. ಅಲ್ಲದೇ ಸಮರ್ಪಕ ನಿರ್ವಹಣೆ ಇಲ್ಲದೇ ಗಿಡಗಂಟಿಗಳಿಂದ ಆವೃತವಾಗಿದೆ.
ಕಾಲುವೆಯಲ್ಲಿನ ಜಾಲಿಗಿಡ, ಕಸ ತೆರವಿಗಾಗಿ ಗ್ರಾಪಂ ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಿದೆ. ಆದರೆ, ಕಾಮರ್ಿಕರಿಗೆ ಗ್ಲೌಸ್,ಮಾಸ್ಕ್,ಬೂಟ್ ನೀಡದೇ ಕಾಲುವೆಗಿಳಿಸಿದ್ದು ಖಂಡನೀಯ ಎಂದರು. ಶೀಘ್ರವೇ ಕಾಮರ್ಿಕರಿಗೆ ರಕ್ಷಣಾ ಸಾಮಗ್ರಿ ಒದಗಿಸಬೇಕು. ಇಲ್ಲವಾದಲ್ಲಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಂಘದ ಶೆರಗೇರು ಗೋಪಾಲ್, ಜೆ.ಶಿವಕುಮಾರ್, ಎಚ್.ಎಂ.ಸಂತೋಷ್, ಬಸವರಾಜ, ಹೊನ್ನೂರಸ್ವಾಮಿ, ಎನ್.ಶ್ರೀನಿವಾಸ್, ಕೆ.ಶಿವಕುಮಾರ್, ಜೆ.ಜಡೇಶ್, ರೈತ ಸಂಘದ ಕಂಪ್ಲಿ ತಾಲೂಕು ಉಪಾಧ್ಯಕ್ಷ ಆನೆಗುಂದಿ ಬಸವರಾಜ ಇತರರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 