ಕಂಪ್ಲಿ: ನವಕರ್ನಾಟಕ ಯುವಶಕ್ತಿ ಸಂಘ ಪ್ರತಿಭಟನೆ
ಲೋಕದರ್ಶನ ವರದಿ
ಕಂಪ್ಲಿ 22: ಸುರಕ್ಷತಾ ಪರಿಕರ ನೀಡದೆ ನಂ.10 ಮುದ್ದಾಪುರ ಗ್ರಾಮದ ವಿಜಯನಗರ ಕಾಲುವೆಯಲ್ಲಿ ಖಾತ್ರಿ ಕಾಮರ್ಿಕರಿಂದ ಗಿಡಗಂಟಿ ತೆರವು ಕಾರ್ಯಕ್ಕೆ ಮುಂದಾಗಿರುವ ಗ್ರಾಪಂ ಕ್ರಮ ಖಂಡಿಸಿ ಸ್ಥಳೀಯ ನವ ಕರ್ನಾಟಕ ಯುವಶಕ್ತಿ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.
ಸಂಘದ ಕ್ಷೇತ್ರಾಧ್ಯಕ್ಷ ಬಿ.ವಿರೂಪಾಕ್ಷಿ ಮಾತನಾಡಿ, ಗ್ರಾಮದ ವಿಜಯನಗರ ಕಾಲುವೆಗೆ ಚರಂಡಿ ನೀರು ಹರಿಸಲಾಗುತ್ತಿದೆ. ಅಲ್ಲದೇ ಸಮರ್ಪಕ ನಿರ್ವಹಣೆ ಇಲ್ಲದೇ ಗಿಡಗಂಟಿಗಳಿಂದ ಆವೃತವಾಗಿದೆ.
ಕಾಲುವೆಯಲ್ಲಿನ ಜಾಲಿಗಿಡ, ಕಸ ತೆರವಿಗಾಗಿ ಗ್ರಾಪಂ ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಿದೆ. ಆದರೆ, ಕಾಮರ್ಿಕರಿಗೆ ಗ್ಲೌಸ್,ಮಾಸ್ಕ್,ಬೂಟ್ ನೀಡದೇ ಕಾಲುವೆಗಿಳಿಸಿದ್ದು ಖಂಡನೀಯ ಎಂದರು. ಶೀಘ್ರವೇ ಕಾಮರ್ಿಕರಿಗೆ ರಕ್ಷಣಾ ಸಾಮಗ್ರಿ ಒದಗಿಸಬೇಕು. ಇಲ್ಲವಾದಲ್ಲಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಂಘದ ಶೆರಗೇರು ಗೋಪಾಲ್, ಜೆ.ಶಿವಕುಮಾರ್, ಎಚ್.ಎಂ.ಸಂತೋಷ್, ಬಸವರಾಜ, ಹೊನ್ನೂರಸ್ವಾಮಿ, ಎನ್.ಶ್ರೀನಿವಾಸ್, ಕೆ.ಶಿವಕುಮಾರ್, ಜೆ.ಜಡೇಶ್, ರೈತ ಸಂಘದ ಕಂಪ್ಲಿ ತಾಲೂಕು ಉಪಾಧ್ಯಕ್ಷ ಆನೆಗುಂದಿ ಬಸವರಾಜ ಇತರರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 