ಕಂಪ್ಲಿ: ನವಕರ್ನಾಟಕ ಯುವಶಕ್ತಿ ಸಂಘ ಪ್ರತಿಭಟನೆ
ಲೋಕದರ್ಶನ ವರದಿ
ಕಂಪ್ಲಿ 22: ಸುರಕ್ಷತಾ ಪರಿಕರ ನೀಡದೆ ನಂ.10 ಮುದ್ದಾಪುರ ಗ್ರಾಮದ ವಿಜಯನಗರ ಕಾಲುವೆಯಲ್ಲಿ ಖಾತ್ರಿ ಕಾಮರ್ಿಕರಿಂದ ಗಿಡಗಂಟಿ ತೆರವು ಕಾರ್ಯಕ್ಕೆ ಮುಂದಾಗಿರುವ ಗ್ರಾಪಂ ಕ್ರಮ ಖಂಡಿಸಿ ಸ್ಥಳೀಯ ನವ ಕರ್ನಾಟಕ ಯುವಶಕ್ತಿ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.
ಸಂಘದ ಕ್ಷೇತ್ರಾಧ್ಯಕ್ಷ ಬಿ.ವಿರೂಪಾಕ್ಷಿ ಮಾತನಾಡಿ, ಗ್ರಾಮದ ವಿಜಯನಗರ ಕಾಲುವೆಗೆ ಚರಂಡಿ ನೀರು ಹರಿಸಲಾಗುತ್ತಿದೆ. ಅಲ್ಲದೇ ಸಮರ್ಪಕ ನಿರ್ವಹಣೆ ಇಲ್ಲದೇ ಗಿಡಗಂಟಿಗಳಿಂದ ಆವೃತವಾಗಿದೆ.
ಕಾಲುವೆಯಲ್ಲಿನ ಜಾಲಿಗಿಡ, ಕಸ ತೆರವಿಗಾಗಿ ಗ್ರಾಪಂ ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಿದೆ. ಆದರೆ, ಕಾಮರ್ಿಕರಿಗೆ ಗ್ಲೌಸ್,ಮಾಸ್ಕ್,ಬೂಟ್ ನೀಡದೇ ಕಾಲುವೆಗಿಳಿಸಿದ್ದು ಖಂಡನೀಯ ಎಂದರು. ಶೀಘ್ರವೇ ಕಾಮರ್ಿಕರಿಗೆ ರಕ್ಷಣಾ ಸಾಮಗ್ರಿ ಒದಗಿಸಬೇಕು. ಇಲ್ಲವಾದಲ್ಲಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಂಘದ ಶೆರಗೇರು ಗೋಪಾಲ್, ಜೆ.ಶಿವಕುಮಾರ್, ಎಚ್.ಎಂ.ಸಂತೋಷ್, ಬಸವರಾಜ, ಹೊನ್ನೂರಸ್ವಾಮಿ, ಎನ್.ಶ್ರೀನಿವಾಸ್, ಕೆ.ಶಿವಕುಮಾರ್, ಜೆ.ಜಡೇಶ್, ರೈತ ಸಂಘದ ಕಂಪ್ಲಿ ತಾಲೂಕು ಉಪಾಧ್ಯಕ್ಷ ಆನೆಗುಂದಿ ಬಸವರಾಜ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 