ಕಂಪ್ಲಿ: ನವಕರ್ನಾಟಕ ಯುವಶಕ್ತಿ ಸಂಘ ಪ್ರತಿಭಟನೆ
ಲೋಕದರ್ಶನ ವರದಿ
ಕಂಪ್ಲಿ 22: ಸುರಕ್ಷತಾ ಪರಿಕರ ನೀಡದೆ ನಂ.10 ಮುದ್ದಾಪುರ ಗ್ರಾಮದ ವಿಜಯನಗರ ಕಾಲುವೆಯಲ್ಲಿ ಖಾತ್ರಿ ಕಾಮರ್ಿಕರಿಂದ ಗಿಡಗಂಟಿ ತೆರವು ಕಾರ್ಯಕ್ಕೆ ಮುಂದಾಗಿರುವ ಗ್ರಾಪಂ ಕ್ರಮ ಖಂಡಿಸಿ ಸ್ಥಳೀಯ ನವ ಕರ್ನಾಟಕ ಯುವಶಕ್ತಿ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.
ಸಂಘದ ಕ್ಷೇತ್ರಾಧ್ಯಕ್ಷ ಬಿ.ವಿರೂಪಾಕ್ಷಿ ಮಾತನಾಡಿ, ಗ್ರಾಮದ ವಿಜಯನಗರ ಕಾಲುವೆಗೆ ಚರಂಡಿ ನೀರು ಹರಿಸಲಾಗುತ್ತಿದೆ. ಅಲ್ಲದೇ ಸಮರ್ಪಕ ನಿರ್ವಹಣೆ ಇಲ್ಲದೇ ಗಿಡಗಂಟಿಗಳಿಂದ ಆವೃತವಾಗಿದೆ.
ಕಾಲುವೆಯಲ್ಲಿನ ಜಾಲಿಗಿಡ, ಕಸ ತೆರವಿಗಾಗಿ ಗ್ರಾಪಂ ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಿದೆ. ಆದರೆ, ಕಾಮರ್ಿಕರಿಗೆ ಗ್ಲೌಸ್,ಮಾಸ್ಕ್,ಬೂಟ್ ನೀಡದೇ ಕಾಲುವೆಗಿಳಿಸಿದ್ದು ಖಂಡನೀಯ ಎಂದರು. ಶೀಘ್ರವೇ ಕಾಮರ್ಿಕರಿಗೆ ರಕ್ಷಣಾ ಸಾಮಗ್ರಿ ಒದಗಿಸಬೇಕು. ಇಲ್ಲವಾದಲ್ಲಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಂಘದ ಶೆರಗೇರು ಗೋಪಾಲ್, ಜೆ.ಶಿವಕುಮಾರ್, ಎಚ್.ಎಂ.ಸಂತೋಷ್, ಬಸವರಾಜ, ಹೊನ್ನೂರಸ್ವಾಮಿ, ಎನ್.ಶ್ರೀನಿವಾಸ್, ಕೆ.ಶಿವಕುಮಾರ್, ಜೆ.ಜಡೇಶ್, ರೈತ ಸಂಘದ ಕಂಪ್ಲಿ ತಾಲೂಕು ಉಪಾಧ್ಯಕ್ಷ ಆನೆಗುಂದಿ ಬಸವರಾಜ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 