ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಗೋನಾಳ ಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಗೋನಾಳ ಗೆ ಪತ್ರಕರ್ತರ ಸಂಘದಿಂದ  ಸನ್ಮಾನ Kannada District Awareness Committee member Gonal honored by Journalists Association

ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಗೋನಾಳ ಗೆ ಪತ್ರಕರ್ತರ ಸಂಘದಿಂದ  ಸನ್ಮಾನ  

ಕೊಪ್ಪಳ 10: ಕನ್ನಡ ಜಿಲ್ಲಾ ಜಾಗೃತಿ ಸಮಿತಿಗೆ ಸದಸ್ಯರಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡ ಇಲ್ಲಿನ ಹಿರಿಯ ಸಾಹಿತಿ ಪತ್ರಕರ್ತ ಹಾಗೂ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾದ ಜಿ.ಎಸ್‌. ಗೋನಾಳ ರವರಿಗೆ ಶುಕ್ರವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು, ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಬಿ. ಸುರೇಶ್ ರವರು ಆಗಮಿಸಿದ್ದರು, ಸಂಘದ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ ಅಧ್ಯಕ್ಷತೆ ವಹಿಸಿದ್ದರು, ಸಂಘದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಎಂ ಸಾಧಿಕ್ ಅಲಿ ,ವಿಶೇಷ ಆಹ್ವಾನಿತ ರಾಜ್ಯ ಸದಸ್ಯ ಎಚ್‌.ಎಸ್‌. ಹರೀಶ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ್, ಸಂಘದ ಗೌರವಾಧ್ಯಕ್ಷ ಬಸವರಾಜ್ ಗುಡ್ಲಾನೂರ್, ಪತ್ರಿಕ ಭವನ್ ಕಟ್ಟಡ ಸಮಿತಿಯ ಅಧ್ಯಕ್ಷ ಎನ್‌. ಎಂ. ದೊಡ್ಡಮನಿ, ಸಂಘದ ಜಿಲ್ಲಾ ಖಜಾಂಚಿ ರಾಜು ಬಿ. ಆರ್‌. ಜಿಲ್ಲಾ ಉಪಾಧ್ಯಕ್ಷ ರುದ್ರಗೌಡ ಪಾಟೀಲ್, ಜಿಲ್ಲಾ ಕಾರ್ಯದರ್ಶಿ ವೀರಣ್ಣ ಕಳ್ಳಿ ಮನಿ ಸೇರಿದಂತೆ ಸಂಘದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು,