ಲಿಂಗಾಯತ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವ ಆಚರಣೆ
Kannada Rajyotsava Celebration by Lingayat Women's Society
ಬೆಳಗಾವಿ 30 : ಶ್ರೀಮಂತ, ಸರ್ವಶ್ರೇಷ್ಠ ಭಾಷೆಯಾಗಿರುವಕನ್ನಡವನ್ನುಉದ್ಯೋಗ, ವಿಚಾರಧಾರೆಗಳ ಕೂಡ ವ್ಯವಹಾರ ನಡೆಸಯಬೇಕು. ಕನ್ನಡದ ನೆಲ, ಜಲ, ಭಾಷೆರಕ್ಷಣೆಗೆಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತುಒಂದಾದರೆ ಮಾತ್ರಕನ್ನಡಕಟ್ಟುವ ಕೆಲಸವಾಗುತ್ತದೆಎಂದು ಪೂಜ್ಯ ಶ್ರೀ ಮ.ನಿ.ಪ್ರ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು.
ಇಲ್ಲಿನ ನೆಹರು ನಗರದಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಶುಕ್ರವಾರ ನ.29 ರಂದುಆಯೋಜಿಸಲಾದಕನ್ನಡರಾಜ್ಯೋತ್ಸವಕಾರ್ಯಕ್ರಮ ವಿಜೃಭಂಣೆಯಯಿಂದ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿ, ಎಲ್ಲಾ ಭಾಷೆಯನ್ನು ಪ್ರೀತಿಸಿ ಆದರೆಕನ್ನಡ ಭಾಷೆ ಉಳಿಸಿ, ಬೆಳೆಸಿ. ಕನ್ನಡ ಭಾಷೆಯಲ್ಲಿಅನ್ಯ ಭಾಷೆಗಳು ಹೊಕ್ಕು, ಕನ್ನಡ ನುಂಗಿ ಹಾಕುತ್ತಿವೆ. ಇದರಿಂದ ನಮ್ಮಕನ್ನಡ ಸಂಸ್ಕೃತಿ ಬಿಟ್ಟು ಬೇರೆ ಭಾಷೆಗಳ ಸಂಸ್ಕೃತಿಗೆ ಒಗ್ಗಿಕೆಣಟಿಜಜಜಿಟಿಜಜಳ್ಳುತ್ತಿದ್ದೇವೆ. ಆದ್ದರಿಂದ ಎಲ್ಲರೂಕಡ್ಡಾಯವಾಗಿಕನ್ನಡದಲ್ಲಿ ಮಾತನಾಡುವ ಪ್ರತಿಜ್ಞೆ ಮಾಡುವ ನಿರ್ಧಾರ ಕೈಗೆಣಟಿಜಜಜಿಟಿಜಜಳ್ಳಬೇಕು ಎಂದರು.ಅನುಷಾಕರಿಬಸಯ್ಯ ಹಿರೇಮಠ ಮಾತನಾಡಿ, ಮಕ್ಕಳು ದೇಶದ ಆಸ್ತಿ,ಅವರಿಗೆ ಸಂಸ್ಕಾರ, ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರಜವಾಬ್ದಾರಿಯಾಗಿದೆಎಂದರು. ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಲಿಂಗಾಯತ ಮಹಿಳಾ ಸಮಾಜಅಧಕ್ಷೆ ಸುನೀತಾ ಪಾಟೀಲ ಸ್ವಾಗತಿಸಿದರು. ಶೋಭಾ ಪಾಟೀಲ, ರಾಜೇಶ್ವರಿ ಹಿರೇಮಠ, ಸಾಹಿತಿಯ. ರು . ಪಾಟೀಲ, ಸಂಸ್ಥಾಪಕಿ ಶೈಲಜಾ ಭಿಂಗೆ, ಜಯಶೀಲಾ ಬ್ಯಾಕೋಡ್ , ಶೈಲಾ ಪಾಟೀಲ, ಜ್ಯೋತಿ ಬದಾಮಿ, ಸುರೇಖಾ ಮಾನ್ವಿ, ಹಾಗೂ ಇತರರುಇದ್ದರು. ಶಾರದಾ ಪಾಟೀಲ ಹಾಗೂ ಅನುಪಮಾ ನಿರೂಪಿಸಿದರು. ಸಹ ಕಾರ್ಯದರ್ಶಿ ವಿದ್ಯಾಗೌಡರ ವಂದಿಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 