ಜೋಯಡಾ ಕೇಂದ್ರ ಸರ್ಕಲ್ದಲ್ಲಿ ವಿವಿಧ ಸಂಘಟನೆಗಳಿಂದ ಕನ್ನಡ ರಾಜ್ಯೋತ್ಸವ.
ಜೋಯಿಡಾ; ತಾಲೂಕಾ ಕೇಂದ್ರ ಮುಖ್ಯ ಸರ್ಕಲ್ದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ 63 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಸುಭಾಷ ಗಾವಡಾ ಮಾತನಾಡಿ ರಾಜ್ಯಕ್ಕೆ ಯಾವ ಯಾವ ಸಂದರ್ಭದಲ್ಲಿ ಕಂಟಕ ಬಂದಾಗ ಎಲ್ಲರೂ ಒಂದಾಗಿ ಹೋರಾಡ ಮಾಡಬೇಕು. ಗಡಿ ತಾಲೂಕ ಜೋಯಿಡಾದಲ್ಲಿ ಕನ್ನಡ ಜಾಗ್ರತಿಯಾಗಿರುವುದು ಹೆಮ್ಮೆ ತಂದಿದೆ ಎಂದರು.
ಗ್ರಾಮದ ಮಿರಾಶಿ ವಿನೋದ ರವರಿಂದ ದ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕ.ರ.ವೆ ಅಧ್ಯಕ್ಷ ಸುರಜ ಹಿರೆಗೌಡರ, ಗಣೇಶ ಹೆಗಡೆ, ಗ್ರಾ.ಪಂ.ಉಪಾಧ್ಯಕ್ಷ ಶ್ಯಾಮ ಪೊಕಳೆ, ಸದಸ್ಯ ಸುರೇಶ ಗಾವಡಾ, ಪ್ರಮುಖರಾದ ಮಾಬಳು ಕುಂಡಲಕರ, ಮಹಿಳಾ ಮುಖಂಡೆ ಶಕುಂತಲಾ ಹಿರೆಗೌಡರ, ಸಚಿನ್ ತಳೆಕರ ಮುಂತಾದವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 