ಸರ್ಕಾರಿ ಕಾರ್ಯಕ್ರಮದ ನಾಮಫಲಕದಲ್ಲಿ ಕನ್ನಡದ ಕಗ್ಗೊಲೆ
ಲೋಕದರ್ಶನ ವರದಿ
ಖಾನಾಪುರ: ಪಟ್ಟಣದಲ್ಲಿ ಭಾನುವಾರ ಜರುಗಿದ ಸಕರ್ಾರಿ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದ ನಾಮಫಲಕದಲ್ಲಿ ಕನ್ನಡ ಭಾಷೆಯ ಪದಗಳನ್ನು ತಪ್ಪಾಗಿ ನಮೂದಿಸುವ ಮೂಲಕ ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳ್ಕರ ಕನ್ನಡ ನಾಡು-ನುಡಿಗೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿರುವ ಕನರ್ಾಟಕ ರಕ್ಷಣಾ ವೇದಿಕೆ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಶಾಸಕಿ ನಿಂಬಾಳ್ಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿತು.
ಪಟ್ಟಣದ ಬಸವೇಶ್ವರ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಶಾಸಕಿ ಡಾ.ಅಂಜಲಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ತಹಸೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ, ಉಪಾಧ್ಯಕ್ಷ ವಿಠ್ಠಲ ಹಿಂಡಲಕರ, ಕಾರ್ಯದಶರ್ಿ ದಶರಥ ಬನೋಶಿ, ಬಸವರಾಜ ಬಡಿಗೇರ, ಭರತೇಶ ಜೋಳದ, ಮಲ್ಲಿಕಾಜರ್ುನ ಹೊಸೂರಿ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 