ಕನ್ನಡ ನಾಡು, ನುಡಿ ಅಭಿವದ್ಧಿಗೆ ಬದ್ಧರಾಗಿ'
ಲೋಕದರ್ಶನ ವರದಿ
ಕುಕನೂರು 04: ಕನ್ನಡ ಸಾಹಿತ್ಯ ಸಮ್ಮೇಳನಗಳು, ನಾಡು, ನುಡಿ ಅಭಿವದ್ಧಿಗೆ ಬೇಕಾದ ನಿರ್ಣಯಗಳನ್ನು ತೆಗೆದುಕೊಳ್ಳಲು ವೇದಿಕೆಯಾಗಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಅಂಗಡಿ ಹೇಳಿದರು.
ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದ ಸಭಾಭವನದಲ್ಲಿ ಮಂಗಳವಾರ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು. ಅಪೂರ್ವ ಸಂಜೀವಿನಿ ಮಹಿಳಾ ಒಕ್ಕೂಟದ ಸರ್ವ ಸದಸ್ಯರು ಸಮ್ಮೇಳನ ಯಶಸ್ವಿಯಾಗುವಲ್ಲಿ ತಮ್ಮ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಗೌರಮ್ಮ ನಾಗನೂರು ಮಾತನಾಡಿ, ನಮ್ಮ ಮಹಿಳಾ ಸಂಘಟನೆಯ ಎಲ್ಲ ಸರ್ವ ಸದಸ್ಯರು ಈ ಸಾಹಿತ್ಯ ಸಮ್ಮೇಳನ ಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿಕೊಡುತ್ತೇವೆ ಎಂದು ಎಲ್ಲರ ಪರವಾಗಿ ನಿಮಗೆ ಭರವಸೆ ನೀಡುತ್ತೇನೆ ಎಂದರು.
ಮುಖಂಡ ಯಂಕರಡ್ಡಿ ಯರಾಶಿ ಮಾತನಾಡಿ, ಇದುವರೆಗೆ ಯಾವುದೇ ಸಾಹಿತ್ಯ ಸಮ್ಮೇಳನ ಗ್ರಾಮದಲ್ಲಿ ಹಮ್ಮಿಕೊಂಡಿಲ್ಲ. ಮೊದಲ ಬಾರಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ. ಈ ಸಮ್ಮೇಳನದ ಯಶಸ್ವಿಗೆ ಎಲ್ಲರೂ ಸಹಕರಿಸುತ್ತೇವೆ ಎಂದರು. ಮಹಾಬಳೇಶಪ್ಪ ಮಾಳೆಕೊಪ್ಪ, ನಿಂಗಪ್ಪ ಚೌಡಿ, ಮಲ್ಲಿಕಾಜರ್ುನ್, ಹಾಲೇಶ ಯರಾಶಿ, ನಿಲಮ್ಮ ಕರಮುಡಿ ಇದ್ದರು. ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಮಂಗಳವಾರ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಅಂಗಡಿ ಮಾತನಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 