ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನುಡಿ ಕನ್ನಡ : ಪ್ರೋ.ಎನ್.ಬಿ.ಪಾಟೀಲ
Kannada is a language with a history of thousands of years: Prof. N.B. Patil
ಮಹಾಲಿಂಗಪುರ 30: ನಮ್ಮ ರಾಜ್ಯ ಶ್ರೀಮಂತಿಕೆಯಿಂದ ಇರಲು ಕಲೆ,ಸಾಹಿತ್ಯ, ಸಂಸ್ಕೃತಿಗಳೆ ಕಾರಣ, ಕಲೆ ಸಾಹಿತ್ಯದ ಅಭಿರುಚಿಯನ್ನು ವಿದ್ಯಾರ್ಥಿಗಳು ಬೆಳಸಿಕೋಳ್ಳಬೇಕು, ನಮ್ಮ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಮರೆಯಬಾರದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಾಡಿನ ನುಡಿ ಕನ್ನಡ ಎಂದು ಪ್ರೋ.ಎನ್.ಬಿ.ಪಾಟೀಲ ಹೇಳಿದರು.
ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್ ಸಿ ಪಿ ಕಲಾ, ವಿಜ್ಞಾನ ಮತ್ತು ಡಿ. ಡಿ. ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ವಿಭಾಗದ ವತಿಯಿಂದ ಕನ್ನಡ ರಾಜೋತ್ಸವ ನಿಮಿತ್ಯವಾಗಿ ಮೂರು ದಿನಗಳ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡುತ್ತಾ ನಾವೇಲ್ಲರೂ ಕನ್ನಡ ಭಾಷೆ ಮಾತನಾಡುತ್ತ ಅದನ್ನು ಉಳಿಸಿ ಬೆಳಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ, ನಮ್ಮ ಪೂರ್ವಿಕರು ಕನ್ನಡ ಭಾಷೆಗಾಗಿ ಶ್ರಮಿಸಿದ್ದಾರೆ ಅವರ ಶ್ರಮದ ಫಲವಾಗಿ ಕನ್ನಡ ಭಾಷೆ ಶ್ರೀಮಂತವಾಗಿದೆ. ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಹೊರತೆಗೆಯಲು ಇತರಹದ ಕಾರ್ಯಕ್ರಮಗಳು ಸಹಾಯಕಾರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಹ ಸಂಯೋಜಕ ಎಸ್.ಎಸ್.ಮುಗಳ್ಯಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಪರಿಚಯಿಸಲು ನಮ್ಮ ಮಹಾವಿದ್ಯಾಲಯ ಎಲ್ಲ ಸೌಲಭ್ಯಗಳನ್ನು ನೀಡುತ್ತಿದೆ, ಕನ್ನಡ ನಾಡು ನುಡಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.
ಮೂರು ದಿನದ ಕಾರ್ಯಕ್ರಮದಲ್ಲಿ ಮೊದಲನೇ ದಿನ ಕನ್ನಡ ನಾಡು ನುಡಿ ಕುರಿತು ಗಾಯನ ಸ್ಪರ್ಧೆ ಎರಡನೇ ದಿನ ಭಾಷಣ ಹಾಗೂ ಮೂರನೇ ದಿನ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ಆಯ್.ಸಿ.ಶಿರೋಳ, ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಾಂಸ್ಕೃತಿಕ ವಿಭಾಗದ ಮುಖಸ್ಥರಾದ ಪಿ.ಎಮ್.ಮನಗಾಂವಿ ಸ್ವಾಗತಿಸಿ ಪುಷ್ಪರ್ಚನೆ ನಡೆಸಿದರು. ಶಂಕರ ಪಾಟೀಲ ವಂದಿಸಿದರು. ಪಿ.ಎಮ್.ಮುತ್ನಾಳಿ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 