ಕನ್ನಡ ಕೇವಲ ಭಾಷೆ ಮಾತ್ರವಲ್ಲ, ಅದು ನಮ್ಮ ಬದುಕು ಕೂಡ ಹೌದು : ಟಿ.ಎಂ.ಸಿ ಅಧ್ಯಕ್ಷ ಭಟ್ಟ ಪ್ರಸಾದ್
Kannada is not just a language, it is also our way of life: TMC President Bhatta Prasad
ಲೋಕದರ್ಶನ ವರದಿ
ಕನ್ನಡ ಕೇವಲ ಭಾಷೆ ಮಾತ್ರವಲ್ಲ, ಅದು ನಮ್ಮ ಬದುಕು ಕೂಡ ಹೌದು : ಟಿ.ಎಂ.ಸಿ ಅಧ್ಯಕ್ಷ ಭಟ್ಟ ಪ್ರಸಾದ್
ಕಂಪ್ಲಿ 02: ಪಟ್ಡಣದ ಅಂಬೇಡ್ಕರ್ ವೃತ್ತದ ಆಟೋ ನಿಲ್ದಾಣ ಬಳಿಯಲ್ಲಿ ಕರವೇ(ಪ್ರವೀಣ್ ಕುಮಾರ ಶೆಟ್ಟಿ ಬಣ) ತಾಲೂಕು ಘಟಕದ ನೇತೃತ್ವದಲ್ಲಿ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವ ಅತ್ಯಂತ ಅದ್ಧೂರಿಯಾಗಿ ಶನಿವಾರ ಆಚರಿಸಿದರು. ಮೊದಲಿಗೆ ಹೊಸ ಬಸ್ ನಿಲ್ದಾಣದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅವರು ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಬೈಕ್ ರಾ್ಯಲಿಗೆ ಚಾಲನೆ ನೀಡಿ ಮಾತನಾಡಿ, ಕನ್ನಡ ಕೇವಲ ಭಾಷೆ ಮಾತ್ರವಲ್ಲ, ಅದು ನಮ್ಮ ಬದುಕು ಕೂಡ ಹೌದು. ಹಾಗಾಗಿ ಕನ್ನಡವನ್ನು ನಾವು ಬದುಕಾಗಿ ಬದಲಾವಣೆ ಮಾಡಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ನಮ್ಮ ಭಾಷೆ, ಸಂಸ್ಕೃತಿಯನ್ನು ನಾವೆಂದೂ ಮರೆಯಬಾರದು ಎಂದರು. ತದನಂತರ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ನಡೆದ ವೇದಿಕೆ ಸಮಾರಂಭದ ಅಧ್ಯಕ್ಷತೆವಹಿಸಿ ತಾಲೂಕು ಅಧ್ಯಕ್ಷ ವೆಂಕಟರಮಣ ಮಾತನಾಡಿ, ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಸುಂದರ ಭಾಷೆ. ಕನ್ನಡ ಭಾಷೆ ನಮ್ಮ ಬದುಕು. ಭಾಷೆ ಹಾಗೂ ನಾಡಿನ ಪರಂಪರೆಯ ಶ್ರೀಮಂತಿಕೆಯನ್ನು ಯಾರೂ ಮರೆಯಬಾರದು ಎಂದರು. ನಂತರ ಸಾಧಕರಿಗೆ ಹಾಗೂ ಗಣ್ಯರಿಗೆ ಸನ್ಮಾನಿಸಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯ ಹೂಗಾರ ರಮೇಶ, ಪಿಐ ಕೆ.ಬಿ.ವಾಸುಕುಮಾರ, ತಾಲೂಕು ಗೌರವಾಧ್ಯಕ್ಷ ಬಿ.ನಾಗೇಂದ್ರ, ಜಿಲ್ಲಾ ಸಂಚಾಲಕ ಬಿ.ರಮೇಶ, , ನಗರ ಘಟಕ ಅಧ್ಯಕ್ಷ ಇಸ್ಮಾಯಿಲ್ಬೇಗ್, ಮುಖಂಡರಾದ ಜಿ.ರಾಮಣ್ಣ ಬಿ.ದೇವೆಂದ್ರ, ಭಗವಾನ್ ವಿ.ತಿಪ್ಪೇಸ್ವಾಮಿ, ಬಿ.ನಾರಾಯಣಪ್ಪ, ಬಿ.ಸಿದ್ದಪ್ಪ, ಕರೇಕಲ್ ಮನೋಹರ, ಬಿ.ಕೆ.ವಿರುಪಾಕ್ಷಿ, ಜಾಫರ್, ಬಾಲೆಸಾಬ್, ಬಳ್ಳಾಪುರ ಮೌನೇಶ, ರಾಕೇಶ,ಯು.ಶರಣ ಪರಶುರಾಮು ತುಕರಾಮು ವೆಂಕಟೇಶ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 