ಕನ್ನಡ ಭಾಷೆ, ಕನ್ನಡಿಗರ ಭಾವನೆಗಳ ಸಂಸ್ಕೃತಿ: ಡಾ. ಅಲ್ಲಮಪ್ರಭುಶ್ರೀ
Kannada language, culture of Kannadigas' feelings: Dr. Allama Prabhushree
ಬೆಳಗಾವಿ 03: ಕನ್ನಡ ಭಾಷೆ ಮತ್ತು ಸಾಹಿತ್ಯ ಉಳಿಯಬೇಕಾದರೆ ನಾವು ಕೇವಲ ನವೆಂಬರ್ 1ನೇ ತಾರೀಕಿನ ಕನ್ನಡಿಗರಾಗಬಾರದು. ವರ್ಷದುದ್ದಕ್ಕೂ, ಜೀವನದುದ್ದಕ್ಕೂ ನಿರಂತರ ಕನ್ನಡ ಭಾಷೆಯನ್ನು ಬಳಸಬೇಕು ಮತ್ತು ಕನ್ನಡ ಕೇವಲ ಹೋರಾಟದ ಭಾಷೆಯಾಗದೆ ಅಭಿವೃದ್ಧಿಯ ಭಾಷೆಯಾಗಬೇಕು. ಕನ್ನಡ ಭಾಷೆ ನಮ್ಮ ಭಾವನೆಗಳ ಸಂಸ್ಕೃತಿಯಾಗಿದೆ ಅದನ್ನು ನಾವು ಗೌರವಿಸಬೇಕು ಎಂದು ನಾಗನೂರು ರುದ್ರಾಕ್ಷಿಮಠ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಅವರು ಬೆಳಗಾವಿ ಶಿವಬಸವ ನಗರದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವದ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ ಮಾತನಾಡಿದರು. ಕನ್ನಡದ ಗಡಿನಾಡು ಬೆಳಗಾವಿಯಲ್ಲಿ ಕನ್ನಡ ಭಾಷೆ ಉಳಿಯಲು, ಕರ್ನಾಟಕದಲ್ಲಿ ಬೆಳಗಾವಿ ಗಟ್ಟಿಯಾಗಿ ನೆಲೆಗೊಳ್ಳಲು ನಾಗನೂರು ಶ್ರೀ ರುದ್ರಾಕ್ಷಿ ಮಠದ ಸೇವೆ ಅಪಾರವಾದದು ಎಂದು ಸ್ಮರಿಸಿದರು.
ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ ಸಭೆಯ ಅಧ್ಯಕ್ಷತೆ ವಹಿಸಿ ಕನ್ನಡ ಪ್ರಾಚೀನ ಕಾಲದಿಂದಲೂ ಜಗತ್ತಿನ ಎರಡನೆಯ ಭಾಷೆಯಾಗಿದೆ, ಸುದೀರ್ಘ ಇತಿಹಾಸ ಉಳ್ಳ ಈ ಭಾಷೆಯನ್ನು ಕಾಪಾಡಿಕೊಂಡು ಸಮೃದ್ಧಗೊಳಿಸಬೇಕೆಂದರು ವೇದಿಕೆ ಮೇಲೆ ಸಾಧಕರಾದ ವಿಶ್ವನಾಥ ದೇವರು ಹಾಗೂ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಉಪನ್ಯಾಸಕ ಏ.ಕೆ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಪರ ನುಡಿಗಳನ್ನಾಡಿದರು, ಉಪನ್ಯಾಸಕಿ ಜಯಶ್ರೀ ಕೆಂಗೇರಿ ನಿರೂಪಿಸಿದರು. ಉಪನ್ಯಾಸಕ ರವಿರಾಜ ಖೋತ ವಂದಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 