ರಾಯಚೂರು ಜಿಲ್ಲೆಯಲ್ಲಿ ಕನ್ನಡ ಶಾಲೆಗಳನ್ನು ಉಳಿಸಬೇಕು: ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ ಹಿ ಕನ್ನಡ ಸೇನೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಕನ್ನಡ ಶಾಲೆಗಳನ್ನು ಉಳಿಸಬೇಕು: ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ ಹಿ ಕನ್ನಡ ಸೇನೆ ಆಗ್ರಹ  Kannada schools should be saved in Raichur district: Kannada Sene demands filling of teacher posts,

ರಾಯಚೂರು 16 :  ರಾಯಚೂರು ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಜಿಲ್ಲೆಯಲ್ಲಿ ಸುಮಾರು 1454 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 239 ಸರ್ಕಾರಿ ಪ್ರೌಢಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಶಾಲೆಗಳು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಪ್ರಮುಖ ಕೇಂದ್ರಗಳಾಗಿವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಹಲವಾರು ಶಿಕ್ಷಕರು ವರ್ಗಾವಣೆಯಾಗಿ ಹೋಗಿದ್ದು, ಅವರ ಸ್ಥಾನಕ್ಕೆ ಹೊಸ ಶಿಕ್ಷಕರನ್ನು ನೇಮಕ ಮಾಡದೇ ಇರುವುದರಿಂದ ಪ್ರಸ್ತುತ ಸುಮಾರು 50 ಶೇಕಡಾ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪರಿಸ್ಥಿತಿ ಉಂಟಾಗಿದೆ.  

ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುವುದರಲ್ಲಿ ಅಡಚಣೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಶಿಕ್ಷಕರ ಕೊರತೆಯಿಂದಾಗಿ ಅನೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಕನ್ನಡ ಮಾಧ್ಯಮ ಶಾಲೆಗಳ ಅಸ್ತಿತ್ವಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ಕನ್ನಡ ಸೇನೆ ಆತಂಕ ವ್ಯಕ್ತಪಡಿಸಿದೆ.ಇದಕ್ಕೆ ಜೊತೆಗೆ, “ಕನ್ನಡ ಉಳಿಸಿ ಹಿ ಕನ್ನಡ ಬೆಳೆಸಿ” ಎಂಬ ಘೋಷಣೆಯಡಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಸ್ಮಾರ್ಟ್‌ ಕ್ಲಾಸ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಅದರೊಂದಿಗೆ ರಾಯಚೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.ಬೇಸಿಗೆ ಕಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಹ ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು ವೈಯಕ್ತಿಕ ಆಸಕ್ತಿ ವಹಿಸಿ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾ ಅಧ್ಯಕ್ಷ ಎಂ. ಬಸವರಾಜ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ:ಗೋವಿಂದಪ್ಪ ಚವಾಣ್,ನಾಗಪ್ಪ, ಅಮರೇಶ ನಾಯಕ, ಮಂಜುನಾಥ್, ಶಿವರಾಜ್ ಬಡಿಗೇರೀ​‍್ವರನಗೌಡ ರಾಮಪ್ಪ ನಾಯಕ, ಪರಶುರಾಮ ಹಾಗೂ ಸಂಘಟನೆ ಕಾರ್ಯಕರ್ತರು ಇದ್ದರು.