ದೇವರಹಿಪ್ಪರಗಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ
Karahunnime celebration in Devarahipparagi
ದೇವರಹಿಪ್ಪರಗಿ 11: ಕಾರ ಹುಣ್ಣಿಮೆ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರೈತರು ಬುಧವಾರದಂದು ಎತ್ತುಗಳನ್ನು ವಿಶೇಷವಾಗಿ ಸಿಂಗರಿಸಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಪಟ್ಟಣದಲ್ಲಿ ಎತ್ತುಗಳಿಗೆ ಅಲಂಕಾರಿಕ ಬಣ್ಣಗಳನ್ನು ಹಚ್ಚಿ, ಕೋಡಣಸು, ಜೂಲುಗಳನ್ನು ಹಾಕಿ ಸಿಂಗರಿಸಲಾಗಿತ್ತು. ಸಂಜೆ ಪಟ್ಟಣದ ಮೇನ್ ಬಜಾರ್ ರಥದ ಮುಂದೆ ಸಾಂಪ್ರದಾಯಿಕವಾಗಿ ಎತ್ತುಗಳನ್ನು ಒಟ್ಟುಗೂಡಿಸಿ ಎತ್ತಿನ ಕೋಡು ಮತ್ತು ಕೊರಳಿಗೆ ಕಡುಬು, ವಡೆ, ಕರಚಿಕಾಯಿ, ಶೇಂಗಾಕಾಯಿ , ಕೊಬ್ಬರಿ ಬಟ್ಟಲು ಸೇರಿದಂತೆ ವಿವಿಧ ಖಾದ್ಯ ಪದಾರ್ಥಗಳನ್ನು ಕಟ್ಟಿ ಸಾಲಾಗಿ ನಿಲ್ಲಿಸಲಾಗಿತ್ತು. ಎತ್ತುಗಳಿಗೆ ಪೂಜೆ ಸಲ್ಲಿಸಿದ ನಂತರ ಎರಡು ಎತ್ತುಗಳಿಗೆ ಮುಂಗಾರು ಮತ್ತು ಹಿಂಗಾರು ಎಂದು ನಾಮಕರಣ ಮಾಡಿ ಐದು ಬಾರಿ ಓಡಿಸಲಾಯಿತು.
ಇದೇ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಂಪತ್ ಜಮಾದಾರ, ವೀರೇಶ ಕುದರಿ, ಮಹೇಶ ಅವಟಿ ಸೇರಿದಂತೆ ಯುವಕರು,ಗ್ರಾಮದ ಪ್ರಮುಖರು, ಗಣ್ಯರು ಹಾಗೂ ರೈತರು ಉಪಸ್ಥಿತರಿದ್ದರು .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 