ದೇವರಹಿಪ್ಪರಗಿಯಲ್ಲಿ ಕಾರ ಹುಣ್ಣಿಮೆ ಸಂಭ್ರಮ
Karahunnime celebration in Devarahipparagi
ದೇವರಹಿಪ್ಪರಗಿ 11: ಕಾರ ಹುಣ್ಣಿಮೆ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರೈತರು ಬುಧವಾರದಂದು ಎತ್ತುಗಳನ್ನು ವಿಶೇಷವಾಗಿ ಸಿಂಗರಿಸಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಪಟ್ಟಣದಲ್ಲಿ ಎತ್ತುಗಳಿಗೆ ಅಲಂಕಾರಿಕ ಬಣ್ಣಗಳನ್ನು ಹಚ್ಚಿ, ಕೋಡಣಸು, ಜೂಲುಗಳನ್ನು ಹಾಕಿ ಸಿಂಗರಿಸಲಾಗಿತ್ತು. ಸಂಜೆ ಪಟ್ಟಣದ ಮೇನ್ ಬಜಾರ್ ರಥದ ಮುಂದೆ ಸಾಂಪ್ರದಾಯಿಕವಾಗಿ ಎತ್ತುಗಳನ್ನು ಒಟ್ಟುಗೂಡಿಸಿ ಎತ್ತಿನ ಕೋಡು ಮತ್ತು ಕೊರಳಿಗೆ ಕಡುಬು, ವಡೆ, ಕರಚಿಕಾಯಿ, ಶೇಂಗಾಕಾಯಿ , ಕೊಬ್ಬರಿ ಬಟ್ಟಲು ಸೇರಿದಂತೆ ವಿವಿಧ ಖಾದ್ಯ ಪದಾರ್ಥಗಳನ್ನು ಕಟ್ಟಿ ಸಾಲಾಗಿ ನಿಲ್ಲಿಸಲಾಗಿತ್ತು. ಎತ್ತುಗಳಿಗೆ ಪೂಜೆ ಸಲ್ಲಿಸಿದ ನಂತರ ಎರಡು ಎತ್ತುಗಳಿಗೆ ಮುಂಗಾರು ಮತ್ತು ಹಿಂಗಾರು ಎಂದು ನಾಮಕರಣ ಮಾಡಿ ಐದು ಬಾರಿ ಓಡಿಸಲಾಯಿತು.
ಇದೇ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಂಪತ್ ಜಮಾದಾರ, ವೀರೇಶ ಕುದರಿ, ಮಹೇಶ ಅವಟಿ ಸೇರಿದಂತೆ ಯುವಕರು,ಗ್ರಾಮದ ಪ್ರಮುಖರು, ಗಣ್ಯರು ಹಾಗೂ ರೈತರು ಉಪಸ್ಥಿತರಿದ್ದರು .
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 