ಕರಿ ಹರಿದ ಬಿಳಿ ಎತ್ತು ಸಂಭ್ರಮಿಸಿದ ರೈತರು
Karahunnimme- Chimmad News
ಚಿಮ್ಮಡ 11; ರೈತರ ಹಬ್ಬವಾದ ಕಾರ ಹುಣ್ಣಿಮೆ ನಿಮಿತ್ಯ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರಿ ಹರಿಯುವ ಸ್ಪರ್ದೆಯಲ್ಲಿ ಬಿಳಿ ಎತ್ತು ಕರಿ ಹರಿಯುವ ಮೂಲಕ ವಿಜಯ ಸಾಧಿಸಿತು.
ಬುಧವಾರ ಸಂಜೆ ಗ್ರಾಮದ ಪ್ರಮುಖ ಬೀದಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕರಿ ಹರಿಯುವ ಸ್ಪರ್ದೆಯಲ್ಲಿ ಕೆಂಪು ಎತ್ತು ಹಾಗೂ ಬಿಳಿ ಎತ್ತುಗಳನ್ನು ಸ್ಪರ್ದೆಗೆ ಅಣಿಗೊಳಿಸಲಾಗಿತ್ತು. ಗ್ರಾಮದ ಪ್ರಮುಖರಿಂದ ತೆಂಗಿನಕಾಯಿ ಒಡೆಯುವ ಮೂಲಕ ಸ್ಪರ್ದೆಗೆ ಚಾಲನೆ ನೀಡಲಾಯಿತು. ಮೊದಲು ಕೆಂಪು ಎತ್ತು ಪ್ರಥಮಸ್ಥಾನದಲ್ಲಿತ್ತಾದರು ಬಿಳಿ ಎತ್ತು ಅದನ್ನು ಹಿಂದಿಕ್ಕಿ ಮುನ್ನುಗ್ಗುವ ಮೂಲಕ ಕರಿ ಹರಿಯಿತು. ಬಿಳಿ ಎತ್ತು ಕರಿ ಹರಿದರೆ ಫಲವತ್ತಾದ ಬೆಳೆ ಬಂದು ರೈತರಿಗ ಲಾಭ ಬರುವುದೆಂಬ ಪ್ರತೀತಿ ಇದ್ದು ಕರಿ ಹರಿಯುತ್ತಲೇ ಯುವಕರು, ರೈತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು.
ಗ್ರಾಮದ ಪ್ರಮುಖರಾದ ರಾಮಣ್ಣ ಮುಗಳಖೋಡ, ಬಿ.ಎಸ್. ಪಾಟೀಲ, ಆರ್.ಎಂ.ಬಗನಾಳ, ಅಣ್ಣಪ್ಪಗೌಡ ಪಾಟೀಲ, ಪುಂಡಲಿಕಪ್ಪಾ ಪೂಜಾರಿ, ಬಾಳಪ್ಪಾ ಹಳಿಂಗಳಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪುಜಾರಿ, ಅಶೋಕ ಧಡೂತಿ, ದುಂಡಪ್ಪಾ ಪಾಟೀಲ ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಪಿಕೆಪಿಎಸ್ ಬ್ಯಾಂಕ್ ನಿರ್ದೆಶಕರು ಸೇರಿದಂತೆ ಹಲವಾರು ಪ್ರಮುಖರೊಂದಿಗೆ ಸಾವಿರಾರು ಜನ ರೈತರು ಉಪಸ್ಥಿತರಿದ್ದರು. ಬನಹಟ್ಟಿ ಏಎಸ್ಸೈ ಶಿವಪ್ಪಾ ಹುದ್ದಾರ ರವರ ನೇತ್ರತ್ವದಲ್ಲಿ ಸೂಕ್ತ ಬಂದೋಬಸ್ತ ಏರ್ಪಡಿಸಲಾಗಿತ್ತು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 