ಚಿತ್ತಾಕುಲಾ ಪಂಚಾಯತ್ ವಿರುದ್ಧ ಜು.2ರಂದು ಬಂದ್ಗೆ ಕರವೇ ಕರೆ
Karave calls for bandh on July 2 against Chittakula Panchayat
ಕಾರವಾರ 29: ಕಸ ವಿಲೇವಾರಿ ವ್ಯವಸ್ಥೆ ಮಾಡದ ಚಿತ್ತಾಕುಲಾ ಪಂಚಾಯತ ಧೋರಣೆ ವಿರೋಧಿಸಿ ಜು.2 ರಂದು ಹಗಲು 12 ತಾಸು ಬಂದ್ ಮಾಡಲಾಗುವುದು ಎಂದು ಕಾರವಾರ ಜಿಲ್ಲಾ ಕರವೇ ಘಟಕ ಘೋಷಿಸಿತು. ಕಾರವಾರ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಮಾಡಿದ ಕರವೇ ಅಧ್ಯಕ್ಷ ಅಕ್ಷಯ ಚಿತ್ತಾಕುಲಾ ಜನತೆ ,ವ್ಯಾಪಾರಸ್ಥರು ಬಂದ್ ಗೆ ಸಹಕರಿಸಲು ಕೋರಿದರು. ಕಸ ವಿಲೇವಾರಿ ಸಮಸ್ಯೆಯಿಂದ ಬೇಸತ್ತಿರುವ ಕಾರವಾರ ತಾಲ್ಲೂಕಿನ ಚಿತ್ತಾಕುಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಾಶಿವಗಡದಲ್ಲಿ ಇದೀಗ ಸಾರ್ವಜನಿಕ ಆಕ್ರೋಶ ಬುಗಿಲೆದ್ದಿದೆ ಎಂದರು.
ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಂಡಿರುವುದನ್ನು ಪ್ರತಿಭಟಿಸಿ, ಜುಲೈ 2 ರಂದು ಸದಾಶಿವಗಡ ಬಂದ್ಗೆ ಕರೆ ನೀಡಲಾಗಿದೆ ಎಂದ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ) ಸದಾಶಿವಗಡ ಕಸದಿಂದ ತುಂಬಿ ಹೋಗಿದೆ. ಕಸ ಎತ್ತುವ ನಾಟಕ ಮಾಡುವವರು ಸ್ವಚ್ಚತಾ ಅಭಿಯಾನ ಪತ್ರಿಕೆಯಲ್ಲಿ ಪೋಟೋಕಷ್ಟೇ ಸೀಮಿತವಾಗಿದ್ದಾರೆ ಎಂದರು. ರಸ್ತೆ ಬದಿಯೇ ಡಂಪಿಂಗ್ ಯಾರ್ಡ್ : ಕಳೆದ ಒಂದೂವರೆ ವರ್ಷದಿಂದ ಈ ಕಸದ ಸಮಸ್ಯೆ ಸದಾಶಿವಗಡವನ್ನು ಕಾಡುತ್ತಿದೆ. ಇಲ್ಲಿನ ತ್ಯಾಜ್ಯ ವಿಲೇವಾರಿ ಘಟಕ ಸಂಪೂರ್ಣ ಸ್ಥಗಿತಗೊಂಡಿದ್ದು, ಮನೆಗಳಿಂದ ಕಸ ಎತ್ತುವವರೇ ಇಲ್ಲದಂತಾಗಿದೆ. ಪರಿಣಾಮವಾಗಿ, ಸ್ಥಳೀಯ ಅಪಾರ್ಟ್ಮೆಂಟ್ಗಳ ನಿವಾಸಿಗಳು ಅನಿವಾರ್ಯವಾಗಿ ಮುಖ್ಯ ರಸ್ತೆಗಳ ಪಕ್ಕ ಹಾಗೂ ಕೆರೆಗಳಿಗೆ ಕಸ ಎಸೆಯುತ್ತಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 