ಬೆಳಗಾವಿಯಲ್ಲೂ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸಲು ಒತ್ತಾಯಿಸಿ ಕರವೇ ಪ್ರತಿಭಟನೆ
Karave protests demanding the opening of IT-BT companies in Belgaum too
ಬೆಳಗಾವಿ 30: ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಿಸಿದರು.
ಐಟಿ-ಬಿಟಿ ಕಂಪನಿಗಳು ಇರದ ಕಾರಣ ಬೆಳಗಾವಿಯಿಂದ ಸುಮಾರು 20 ಸಾವಿರ ಉದ್ಯೋಗಾಕಾಂಕ್ಷಿಗಳು ನೌಕರಿಗಾಗಿ ಬೆಂಗಳೂರು ಮತ್ತು ಪುಣೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಬೆಳಗಾವಿಯಲ್ಲಿಯೂ ಐಟಿ-ಬಿಟಿ ಕಂಪನಿಗಳನ್ನು ನಿರ್ಮಾಣ ಮಾಡಿದರೇ, ಉದ್ಯೋಗ ಅರಸಿ ಹೋಗುವ ವಿದ್ಯಾರ್ಥಿಗಳಿಗೆ ಮತ್ತು ತಂದೆ ತಾಯಿಯನ್ನು ಬಿಟ್ಟು ಬದುಕುತ್ತಿರುವ ಮಕ್ಕಳಿಗೆ ಅನುಕೂಲವಾಗುತ್ತದೆ. ಅಲ್ಲದೇ, ಬೆಳಗಾವಿಯೂ ಅಭಿವೃದ್ಧಿಯೂ ಆಗುತ್ತದೆ. ಆದ್ದರಿಂದ ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೇ, ಪ್ರಾಣ ತ್ಯಾಗಕ್ಕೂ ಸಿದ್ಧವಾಗಿದ್ದು, ಉಗ್ರ ಹೋರಾಟವನ್ನು ನಡೆಸುತ್ತೇವೆ ಎಂದು ಬಣದ ಜಿಲ್ಲಾಧ್ಯಕ್ಷ ಆರ್. ಅಭಿಲಾಷ್ ಎಚ್ಚರಿಸಿದರು.
ಇಂಜಿನಿಯರ್ ಪದವಿ ಪಡೆದು ಆಟೋ ಓಡಿಸುತ್ತಿರುವ ಪದವಿಧರನೊಂದಿಗೆ ಇಂಜಿನಿಯರ್ ಸಮೋಸಾಗಳನ್ನು ಮಾರಾಟ ಮಾಡುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಕರವೇ ಪ್ರವೀಣ ಶೆಟ್ಟಿ ಬಣದ ನಗರಾಧ್ಯಕ್ಷ ರಾಜು ಕಲ್ಪತ್ರಿ, ಜಿಲ್ಲಾ ಉಪಾಧ್ಯಕ್ಷ ಕಣ್ಣಪ್ಪ ಬಡಕನ್ನವರ, ಜಿಲ್ಲಾ. ಪ್ರಧಾನ ಕಾರ್ಯದರ್ಶಿ ರಾಜು ಗಲಗಲಿ, ಅರುಣ, ಪಾಟೀಲ, ಬಾಳಾಸಾಹೇಬ ಉದಗಟ್ಟಿ, ಗುರುಗೌಡಾ ಪಾಟೀಲ, ಗಿರಿಜಾ, ಜೋಯಲ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 