ಬೆಳಗಾವಿಯಲ್ಲೂ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸಲು ಒತ್ತಾಯಿಸಿ ಕರವೇ ಪ್ರತಿಭಟನೆ
Karave protests demanding the opening of IT-BT companies in Belgaum too
ಬೆಳಗಾವಿ 30: ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಿಸಿದರು.
ಐಟಿ-ಬಿಟಿ ಕಂಪನಿಗಳು ಇರದ ಕಾರಣ ಬೆಳಗಾವಿಯಿಂದ ಸುಮಾರು 20 ಸಾವಿರ ಉದ್ಯೋಗಾಕಾಂಕ್ಷಿಗಳು ನೌಕರಿಗಾಗಿ ಬೆಂಗಳೂರು ಮತ್ತು ಪುಣೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಬೆಳಗಾವಿಯಲ್ಲಿಯೂ ಐಟಿ-ಬಿಟಿ ಕಂಪನಿಗಳನ್ನು ನಿರ್ಮಾಣ ಮಾಡಿದರೇ, ಉದ್ಯೋಗ ಅರಸಿ ಹೋಗುವ ವಿದ್ಯಾರ್ಥಿಗಳಿಗೆ ಮತ್ತು ತಂದೆ ತಾಯಿಯನ್ನು ಬಿಟ್ಟು ಬದುಕುತ್ತಿರುವ ಮಕ್ಕಳಿಗೆ ಅನುಕೂಲವಾಗುತ್ತದೆ. ಅಲ್ಲದೇ, ಬೆಳಗಾವಿಯೂ ಅಭಿವೃದ್ಧಿಯೂ ಆಗುತ್ತದೆ. ಆದ್ದರಿಂದ ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೇ, ಪ್ರಾಣ ತ್ಯಾಗಕ್ಕೂ ಸಿದ್ಧವಾಗಿದ್ದು, ಉಗ್ರ ಹೋರಾಟವನ್ನು ನಡೆಸುತ್ತೇವೆ ಎಂದು ಬಣದ ಜಿಲ್ಲಾಧ್ಯಕ್ಷ ಆರ್. ಅಭಿಲಾಷ್ ಎಚ್ಚರಿಸಿದರು.
ಇಂಜಿನಿಯರ್ ಪದವಿ ಪಡೆದು ಆಟೋ ಓಡಿಸುತ್ತಿರುವ ಪದವಿಧರನೊಂದಿಗೆ ಇಂಜಿನಿಯರ್ ಸಮೋಸಾಗಳನ್ನು ಮಾರಾಟ ಮಾಡುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಕರವೇ ಪ್ರವೀಣ ಶೆಟ್ಟಿ ಬಣದ ನಗರಾಧ್ಯಕ್ಷ ರಾಜು ಕಲ್ಪತ್ರಿ, ಜಿಲ್ಲಾ ಉಪಾಧ್ಯಕ್ಷ ಕಣ್ಣಪ್ಪ ಬಡಕನ್ನವರ, ಜಿಲ್ಲಾ. ಪ್ರಧಾನ ಕಾರ್ಯದರ್ಶಿ ರಾಜು ಗಲಗಲಿ, ಅರುಣ, ಪಾಟೀಲ, ಬಾಳಾಸಾಹೇಬ ಉದಗಟ್ಟಿ, ಗುರುಗೌಡಾ ಪಾಟೀಲ, ಗಿರಿಜಾ, ಜೋಯಲ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 