ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು

ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು  Karave taluk office bearers election, membership drive today

ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು  

ದೇವರಹಿಪ್ಪರಗಿ 25: ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ)ದಿಂದ ನೂತನ ದೇವರಹಿಪ್ಪರಗಿ ತಾಲೂಕ ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನವನ್ನು ಆಯೋಜಿಸಲಾಗಿದೆ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರ ಆದೇಶದ ಮೇರೆಗೆ ಕರವೇ ಮುಖಂಡ ರಹಿಮಾನಸಾಬ್ ಕನಕಾಲ್ ತಿಳಿಸಿದ್ದಾರೆ.   ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದಿ.26ರಂದು ರವಿವಾರ ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಬೈಕ್ ರಾ​‍್ಯಲಿ ಮೂಲಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ತಾಲೂಕು ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳಾದ ಬಸವರಾಜ ತಾಳಿಕೋಟಿ, ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಗದ್ದುಗೆ ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಲೂಕು ಘಟಕದ ಪದಾಧಿಕಾರಿಗಳು ಆಯ್ಕೆ ಹಾಗೂ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರವೇ ಮುಖಂಡ ರಹಿಮಾನಸಾಬ್ ಕನಕಾಲ್ ತಿಳಿಸಿದ್ದಾರೆ.